ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಝಾಗ್‌ ಅನಿಲ ಸೋರಿಕೆ: ಎಲ್‌ಜಿ ಪಾಲಿಮರ್ಸ್‌ ಸಿಇಒ ಸೇರಿ 10 ಜನರ ಬಂಧನ

Last Updated 8 ಜುಲೈ 2020, 2:08 IST
ಅಕ್ಷರ ಗಾತ್ರ

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (ವೈಝಾಗ್‌) ಅನಿಲ ಸೋರಿಕೆಯಾಗಿ 12 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್‌ಜಿ ಪಾಲಿಮರ್ಸ್‌ ಕಂಪನಿಯ ಸಿಇಒ ಹಾಗೂ ಇಬ್ಬರು ನಿರ್ದೇಶಕರು ಸೇರಿದಂತೆ 10ಜನರನ್ನು ಮಂಗಳವಾರ ತಡ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಅನಿಲ ಸೋರಿಕೆ ಘಟನೆ ಬಗ್ಗೆ ಆಂಧ್ರಪ್ರದೇಶ ಸರ್ಕಾರ ಉನ್ನತಮಟ್ಟದ ತನಿಖೆ ಸಮಿತಿಯನ್ನು ರಚನೆ ಮಾಡಿತ್ತು. ಈ ಸಮಿತಿ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರಿಗೆ ವರದಿ ಸಲ್ಲಿಸಿದ ಮರು ದಿನವೇ ಪೊಲೀಸರು 10ಜನರನ್ನು ಬಂಧಿಸಿದ್ದಾರೆ. ಘಟನೆ ನಡೆದು 2 ತಿಂಗಳ ಬಳಿಕ ಆರೋಪಿಗಳ ಬಂಧನವಾಗಿದೆ.

ಎಲ್‌ಜಿ ಪಾಲಿಮರ್ಸ್‌ನಲ್ಲಿ ಕಳಪೆ ಸುರಕ್ಷತಾಕ್ರಮಗಳು ಹಾಗೂ ನಿರ್ವಹಣೆ ಕೊರತೆಯೇ ಅನಿಲ ಸೋರಿಕೆಗೆ ಕಾರಣ ಎಂದು ಉನ್ನತಮಟ್ಟದ ತನಿಖಾ ವರದಿಯಲ್ಲಿ ಹೇಳಲಾಗಿದೆ ಎಂದು ವಿಶಾಖಪಟ್ಟಣ ಪೊಲೀಸ್‌ ಮುಖ್ಯಸ್ಥರಾದ ಆರ್‌,ಕೆ. ಮೀನಾ ತಿಳಿಸಿದ್ದಾರೆ.

ಮೇ 7ರಂದು ಎಲ್‌ಜಿ ಪಾಲಿಮರ್ಸ್‌ ವಿರುದ್ಧ ಸ್ಥಳೀಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಅನಿಲ ಸೋರಿಕೆಯಿಂದಾಗಿ 12 ಜನರು ಮೃತಪಟ್ಟು 585 ಜನರು ಅನಾರೋಗ್ಯಕ್ಕೆ ತುತ್ತಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT