ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳಭಟ್ಟಿ ದುರಂತ: ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ ಘೋಷಿಸಿದ ಪಂಜಾಬ್‌ ಸಿಎಂ

ಸಾವಿನ ಸಂಖ್ಯೆ 86ಕ್ಕೆ ಏರಿಕೆ
Last Updated 1 ಆಗಸ್ಟ್ 2020, 15:17 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 86ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತರ್ನ್‌ ಟರಾನ್‌ ಜಿಲ್ಲೆಯೊಂದರಲ್ಲಿ ಮೃತಪಟ್ಟವರ ಸಂಖ್ಯೆ 63ಕ್ಕೆ ತಲುಪಿದೆ ಎಂದು ಜಿಲ್ಲಾಧಿಕಾರಿ ಕುಲ್ವಂತ್‌ ಸಿಂಗ್‌ ತಿಳಿಸಿದ್ದಾರೆ.

ಅಮೃತಸರದಲ್ಲಿ 12 ಮತ್ತು ಗುರುದಾಸ್‌ಪುರದ ಬಟಾಲದಲ್ಲಿ ಈವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ 7 ಅಬಕಾರಿ ಮತ್ತು ತೆರಿಗೆ ಅಧಿಕಾರಿಗಳು, 2 ಡಿಎಸ್‌ಪಿ, 4 ಎಸ್ಎಚ್‌ಒ ಪೊಲೀಸರನ್ನು ಅಮಾನತುಗೊಳಿಸಿ ಸಿಎಂ ಅಮರಿಂದರ್‌ ಸಿಂಗ್‌ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT