ಚಂಡೀಗಡ: ಪಂಜಾಬ್ನಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 86ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ತರ್ನ್ ಟರಾನ್ ಜಿಲ್ಲೆಯೊಂದರಲ್ಲಿ ಮೃತಪಟ್ಟವರ ಸಂಖ್ಯೆ 63ಕ್ಕೆ ತಲುಪಿದೆ ಎಂದು ಜಿಲ್ಲಾಧಿಕಾರಿ ಕುಲ್ವಂತ್ ಸಿಂಗ್ ತಿಳಿಸಿದ್ದಾರೆ.
ಅಮೃತಸರದಲ್ಲಿ 12 ಮತ್ತು ಗುರುದಾಸ್ಪುರದ ಬಟಾಲದಲ್ಲಿ ಈವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ 7 ಅಬಕಾರಿ ಮತ್ತು ತೆರಿಗೆ ಅಧಿಕಾರಿಗಳು, 2 ಡಿಎಸ್ಪಿ, 4 ಎಸ್ಎಚ್ಒ ಪೊಲೀಸರನ್ನು ಅಮಾನತುಗೊಳಿಸಿ ಸಿಎಂ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.
Punjab CM Captain Amarinder Singh has ordered the suspension of, & inquiry against, 7 excise & taxation officers & inspectors, along with 2 DSPs & 4 SHOs of police in connection with the hooch tragedy, which has so far claimed 86 lives: State govt