<p><strong>ನವದೆಹಲಿ: </strong>ಕೋವಿಡ್–19 ಹಿನ್ನೆಲೆಯಲ್ಲಿ ದೇಶದಾದ್ಯಂತ ಇದ್ದ ಲಾಕ್ಡೌನ್ನಿಂದ ವಾಯುಮಾಲಿನ್ಯ ಪ್ರಮಾಣ ಇಳಿಕೆಯಾಗಿ, 630 ಅವಧಿಪೂರ್ವ ಮರಣ ತಪ್ಪಿದಂತಾಗಿದೆ. ಅಲ್ಲದೆ, ಅಂದಾಜು ₹5,174 ಕೋಟಿ ಆರೋಗ್ಯ ವೆಚ್ಚವೂ ಉಳಿತಾಯವಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ.</p>.<p>ಬ್ರಿಟನ್ನ ಸರ್ರಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸೇರಿದಂತೆ ಇತರೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಲಾಕ್ಡೌನ್ ಆರಂಭವಾದಾಗಿನಿಂದ ದೆಹಲಿ, ಮುಂಬೈ, ಕೋಲ್ಕತ್ತ, ಚೆನ್ನೈ ಮತ್ತು ಹೈದರಾಬಾದ್ ನಗರಗಳಲ್ಲಿ, ವಾಹನ ಮತ್ತು ಇತರೆ ಮೂಲಗಳಿಂದ ಉತ್ಪತ್ತಿಯಾಗುವ ಸೂಕ್ಷ್ಮ ಕಣಗಳ (ಪಿಎಂ 2.5) ಪ್ರಮಾಣವನ್ನು ಅಧ್ಯಯನ ಮಾಡಿದ್ದರು.</p>.<p>ಮಾರ್ಚ್ 25ರಿಂದ ಮೇ 11ರವರೆಗೆ ಈ ಅಧ್ಯಯನ ನಡೆದಿದ್ದು, ಈ ಪ್ರಮಾಣವನ್ನು ಕಳೆದ ಐದು ವರ್ಷಕ್ಕೆ ಹೋಲಿಸಲಾಗಿದೆ. ಈ ವರದಿ‘ಸಸ್ಟೈನೇಬಲ್ ಸಿಟೀಸ್ ಆ್ಯಂಡ್ ಸೊಸೈಟಿ’ ಹೆಸರಿನ ನಿಯತಕಾಲಿಕದಲ್ಲಿ ಪ್ರಕಟವಾಗಿದೆ.</p>.<p>ಈ ಸಂದರ್ಭದಲ್ಲಿ ಐದೂ ನಗರಗಳಲ್ಲಿ ವಾಯುಮಾಲಿನ್ಯ ಪ್ರಮಾಣ ಇಳಿಕೆಯಾಗಿರುವುದು ಕಂಡುಬಂದಿದೆ. ಮುಂಬೈನಲ್ಲಿ ಜೀವಕ್ಕೆ ಹಾನಿ ಉಂಟುಮಾಡಬಲ್ಲ ಕಣಗಳ ಪ್ರಮಾಣ ಶೇ 10 ಹಾಗೂ ದೆಹಲಿಯಲ್ಲಿ ಶೇ 54ರಷ್ಟು ಇಳಿಕೆಯಾಗಿತ್ತು. ಉಳಿದ ನಗರಗಳಲ್ಲಿ ಈ ಪ್ರಮಾಣ ಶೇ 24–32ರ ನಡುವಿತ್ತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೋವಿಡ್–19 ಹಿನ್ನೆಲೆಯಲ್ಲಿ ದೇಶದಾದ್ಯಂತ ಇದ್ದ ಲಾಕ್ಡೌನ್ನಿಂದ ವಾಯುಮಾಲಿನ್ಯ ಪ್ರಮಾಣ ಇಳಿಕೆಯಾಗಿ, 630 ಅವಧಿಪೂರ್ವ ಮರಣ ತಪ್ಪಿದಂತಾಗಿದೆ. ಅಲ್ಲದೆ, ಅಂದಾಜು ₹5,174 ಕೋಟಿ ಆರೋಗ್ಯ ವೆಚ್ಚವೂ ಉಳಿತಾಯವಾಗಿದೆ ಎಂದು ಅಧ್ಯಯನವೊಂದು ತಿಳಿಸಿದೆ.</p>.<p>ಬ್ರಿಟನ್ನ ಸರ್ರಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸೇರಿದಂತೆ ಇತರೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಲಾಕ್ಡೌನ್ ಆರಂಭವಾದಾಗಿನಿಂದ ದೆಹಲಿ, ಮುಂಬೈ, ಕೋಲ್ಕತ್ತ, ಚೆನ್ನೈ ಮತ್ತು ಹೈದರಾಬಾದ್ ನಗರಗಳಲ್ಲಿ, ವಾಹನ ಮತ್ತು ಇತರೆ ಮೂಲಗಳಿಂದ ಉತ್ಪತ್ತಿಯಾಗುವ ಸೂಕ್ಷ್ಮ ಕಣಗಳ (ಪಿಎಂ 2.5) ಪ್ರಮಾಣವನ್ನು ಅಧ್ಯಯನ ಮಾಡಿದ್ದರು.</p>.<p>ಮಾರ್ಚ್ 25ರಿಂದ ಮೇ 11ರವರೆಗೆ ಈ ಅಧ್ಯಯನ ನಡೆದಿದ್ದು, ಈ ಪ್ರಮಾಣವನ್ನು ಕಳೆದ ಐದು ವರ್ಷಕ್ಕೆ ಹೋಲಿಸಲಾಗಿದೆ. ಈ ವರದಿ‘ಸಸ್ಟೈನೇಬಲ್ ಸಿಟೀಸ್ ಆ್ಯಂಡ್ ಸೊಸೈಟಿ’ ಹೆಸರಿನ ನಿಯತಕಾಲಿಕದಲ್ಲಿ ಪ್ರಕಟವಾಗಿದೆ.</p>.<p>ಈ ಸಂದರ್ಭದಲ್ಲಿ ಐದೂ ನಗರಗಳಲ್ಲಿ ವಾಯುಮಾಲಿನ್ಯ ಪ್ರಮಾಣ ಇಳಿಕೆಯಾಗಿರುವುದು ಕಂಡುಬಂದಿದೆ. ಮುಂಬೈನಲ್ಲಿ ಜೀವಕ್ಕೆ ಹಾನಿ ಉಂಟುಮಾಡಬಲ್ಲ ಕಣಗಳ ಪ್ರಮಾಣ ಶೇ 10 ಹಾಗೂ ದೆಹಲಿಯಲ್ಲಿ ಶೇ 54ರಷ್ಟು ಇಳಿಕೆಯಾಗಿತ್ತು. ಉಳಿದ ನಗರಗಳಲ್ಲಿ ಈ ಪ್ರಮಾಣ ಶೇ 24–32ರ ನಡುವಿತ್ತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>