ರಾಜಸ್ಥಾನವನ್ನು ಸಮರ್ಥಗೊಳಿಸಲು ಹಾಗೂ ಒಟ್ಟಾಗಿ 8 ಕೋಟಿ ಜನರ ಸೇವೆ ಮಾಡುವ ಕುರಿತು ಚರ್ಚಿಸಲು ಬರುವಂತೆ ಶಾಸಕರನ್ನು ಕೋರಲಾಗಿದೆ. ಇಲ್ಲಿ ಯಾರೊಂದಿಗಾದರೂ ಯಾವುದೇ ಭಿನ್ನತೆ ಇದ್ದರೆ, ಅವರು ಮುಚ್ಚಿಟ್ಟುಕೊಳ್ಳದೆ ನೇರವಾಗಿ ಹೇಳಬೇಕು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಎಲ್ಲರ ಮಾತುಗಳನ್ನೂ ಕೇಳಿ, ಪರಿಹಾರ ಕಂಡುಕೊಳ್ಳಲು ಸಿದ್ಧರಿದ್ದಾರೆ ಎಂದಿದ್ದಾರೆ.