ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, 'ರಾಜಸ್ಥಾನ ಮುಖ್ಯಮಂತ್ರಿ ಕಾನೂನು ಉಲ್ಲಂಘಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಮೊದಲು ಅವರು ಬಹುಜನ ಸಮಾಜವಾದಿ ಪಕ್ಷದ ಶಾಸಕರನ್ನು ಕಾಂಗ್ರೆಸ್ಗೆ ಸೇರುವಂತೆ ಮಾಡಿದ್ದರು. ಈಗ ಮತ್ತೆ ಅಕ್ರಮವಾಗಿ ಫೋನ್ ಕರೆಗಳನ್ನು ಕದ್ದಾಲಿಸುವ ಮೂಲಕ ಅವರು ಕಾನೂನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಬೇಕು' ಎಂದು ಮಾಯಾವತಿ ತಿಳಿಸಿದ್ದಾರೆ.