<p><strong>ಲಖನೌ:</strong> ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕೆಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಒತ್ತಾಯಿಸಿದ್ದಾರೆ.</p>.<p>ಬಿಜೆಪಿಯು ರಾಜ್ಯದಲ್ಲಿ ಶಾಸಕರ ಖರೀದಿ ಮಾಡುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿಕೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮಾಯಾವತಿ ಕಾಂಗ್ರೆಸ್ ಮುಖಂಡರು ರಾಜಸ್ಥಾನದ ಬಿಎಸ್ಪಿ ಶಾಸಕರೊಂದಿಗೆ ಇದನ್ನೇ ಮಾಡಿದ್ದರು ಎಂದು ತಿಳಿಸಿದ್ದಾರೆ.</p>.<p>ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, 'ರಾಜಸ್ಥಾನ ಮುಖ್ಯಮಂತ್ರಿ ಕಾನೂನು ಉಲ್ಲಂಘಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಮೊದಲು ಅವರು ಬಹುಜನ ಸಮಾಜವಾದಿ ಪಕ್ಷದ ಶಾಸಕರನ್ನು ಕಾಂಗ್ರೆಸ್ಗೆ ಸೇರುವಂತೆ ಮಾಡಿದ್ದರು. ಈಗ ಮತ್ತೆ ಅಕ್ರಮವಾಗಿ ಫೋನ್ ಕರೆಗಳನ್ನು ಕದ್ದಾಲಿಸುವ ಮೂಲಕ ಅವರು ಕಾನೂನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಬೇಕು' ಎಂದು ಮಾಯಾವತಿ ತಿಳಿಸಿದ್ದಾರೆ.</p>.<p>'ರಾಜಸ್ಥಾನದಲ್ಲಿ ಮುಂದುವರೆದಿರುವ ರಾಜಕೀಯ ಗೊಂದಲ ಮತ್ತು ಅಸ್ಥಿರತೆಗಳ ಬಗ್ಗೆ ರಾಜ್ಯಪಾಲರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಆ ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಶಿಫಾರಸು ಮಾಡಿ, ಪ್ರಜಾಪ್ರಭುತ್ವ ಉಳಿಸಬೇಕು' ಎಂದು ಮಾಯಾವತಿ ಅವರು ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕೆಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಒತ್ತಾಯಿಸಿದ್ದಾರೆ.</p>.<p>ಬಿಜೆಪಿಯು ರಾಜ್ಯದಲ್ಲಿ ಶಾಸಕರ ಖರೀದಿ ಮಾಡುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿಕೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮಾಯಾವತಿ ಕಾಂಗ್ರೆಸ್ ಮುಖಂಡರು ರಾಜಸ್ಥಾನದ ಬಿಎಸ್ಪಿ ಶಾಸಕರೊಂದಿಗೆ ಇದನ್ನೇ ಮಾಡಿದ್ದರು ಎಂದು ತಿಳಿಸಿದ್ದಾರೆ.</p>.<p>ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, 'ರಾಜಸ್ಥಾನ ಮುಖ್ಯಮಂತ್ರಿ ಕಾನೂನು ಉಲ್ಲಂಘಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಮೊದಲು ಅವರು ಬಹುಜನ ಸಮಾಜವಾದಿ ಪಕ್ಷದ ಶಾಸಕರನ್ನು ಕಾಂಗ್ರೆಸ್ಗೆ ಸೇರುವಂತೆ ಮಾಡಿದ್ದರು. ಈಗ ಮತ್ತೆ ಅಕ್ರಮವಾಗಿ ಫೋನ್ ಕರೆಗಳನ್ನು ಕದ್ದಾಲಿಸುವ ಮೂಲಕ ಅವರು ಕಾನೂನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಬೇಕು' ಎಂದು ಮಾಯಾವತಿ ತಿಳಿಸಿದ್ದಾರೆ.</p>.<p>'ರಾಜಸ್ಥಾನದಲ್ಲಿ ಮುಂದುವರೆದಿರುವ ರಾಜಕೀಯ ಗೊಂದಲ ಮತ್ತು ಅಸ್ಥಿರತೆಗಳ ಬಗ್ಗೆ ರಾಜ್ಯಪಾಲರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಆ ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಶಿಫಾರಸು ಮಾಡಿ, ಪ್ರಜಾಪ್ರಭುತ್ವ ಉಳಿಸಬೇಕು' ಎಂದು ಮಾಯಾವತಿ ಅವರು ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>