<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಹೊರವಲಯದಲ್ಲಿ ಗುರುವಾರ ತಡರಾತ್ರಿ ನಡೆದ ಎನ್ಕೌಂಟರ್ನಲ್ಲಿ ಸಿಆರ್ಪಿಎಫ್ ಮುಖ್ಯ ಪೇದೆ ಮತ್ತು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನೆಯಲ್ಲಿ ಉಗ್ರ ಜಹೀದ್ ದಾಸ್ ಎಂಬಾತನನ್ನು ಕೊಲ್ಲಲಾಗಿದೆ. ಈತ ಕಳೆದ ವಾರ ಅನಂತ್ನಾಗದಲ್ಲಿ ಆರು ವರ್ಷದ ಬಾಲಕ, ನಾಗರಿಕರೊಬ್ಬರು ಮತ್ತು ಸಿಆರ್ಪಿಎಫ್ ಯೋಧನನ್ನು ಗುಂಡಿಕ್ಕಿ ಕೊಂದಿದ್ದ ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.</p>.<p>ಹಜರತ್ಬಾಲ್ ದೇಗುಲದ ಸಮೀಪವಿರುವ ಮಾಲ್ಬಾಗ್ ಎಂಬಲ್ಲಿ ಈ ಎನ್ಕೌಂಟರ್ ನಡೆದಿದೆ. ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇಲೆ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದರು. ಆಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಈ ವೇಳೆ ಜಹೀದ್ ದಾಸ್ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾರ್ಯಾಚರಣೆ ವೇಳೆ ಮೂವರು ಸಿಆರ್ಪಿಎಫ್ ಯೋಧರು ಆರಂಭದಲ್ಲಿ ಗಾಯಗೊಂಡಿದ್ದರು. ಅವರನ್ನು ‘92 ಬೇಸ್ ಆರ್ಮಿ’ ಆಸ್ಪತ್ರೆಗೆ ಸೇರಿಸಲಾಯಿತು. ಅವರ ಪೈಕಿ ಕುಲದೀಪ್ ಉರಾವನ್ ಎಂಬ ಹೆಡ್ ಕಾನ್ಸ್ಟೆಬಲ್ ತೀವ್ರ ಗಾಯಗಳಿಂದಾಗಿ ಮೃತಪಟ್ಟಿದ್ದಾರೆ.</p>.<p>ಸ್ಥಳದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಉಗ್ರರಿರುವ ಕುರಿತ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಸದ್ಯ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಹೊರವಲಯದಲ್ಲಿ ಗುರುವಾರ ತಡರಾತ್ರಿ ನಡೆದ ಎನ್ಕೌಂಟರ್ನಲ್ಲಿ ಸಿಆರ್ಪಿಎಫ್ ಮುಖ್ಯ ಪೇದೆ ಮತ್ತು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನೆಯಲ್ಲಿ ಉಗ್ರ ಜಹೀದ್ ದಾಸ್ ಎಂಬಾತನನ್ನು ಕೊಲ್ಲಲಾಗಿದೆ. ಈತ ಕಳೆದ ವಾರ ಅನಂತ್ನಾಗದಲ್ಲಿ ಆರು ವರ್ಷದ ಬಾಲಕ, ನಾಗರಿಕರೊಬ್ಬರು ಮತ್ತು ಸಿಆರ್ಪಿಎಫ್ ಯೋಧನನ್ನು ಗುಂಡಿಕ್ಕಿ ಕೊಂದಿದ್ದ ಎಂದು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.</p>.<p>ಹಜರತ್ಬಾಲ್ ದೇಗುಲದ ಸಮೀಪವಿರುವ ಮಾಲ್ಬಾಗ್ ಎಂಬಲ್ಲಿ ಈ ಎನ್ಕೌಂಟರ್ ನಡೆದಿದೆ. ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇಲೆ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದರು. ಆಗ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಈ ವೇಳೆ ಜಹೀದ್ ದಾಸ್ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಕಾರ್ಯಾಚರಣೆ ವೇಳೆ ಮೂವರು ಸಿಆರ್ಪಿಎಫ್ ಯೋಧರು ಆರಂಭದಲ್ಲಿ ಗಾಯಗೊಂಡಿದ್ದರು. ಅವರನ್ನು ‘92 ಬೇಸ್ ಆರ್ಮಿ’ ಆಸ್ಪತ್ರೆಗೆ ಸೇರಿಸಲಾಯಿತು. ಅವರ ಪೈಕಿ ಕುಲದೀಪ್ ಉರಾವನ್ ಎಂಬ ಹೆಡ್ ಕಾನ್ಸ್ಟೆಬಲ್ ತೀವ್ರ ಗಾಯಗಳಿಂದಾಗಿ ಮೃತಪಟ್ಟಿದ್ದಾರೆ.</p>.<p>ಸ್ಥಳದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಉಗ್ರರಿರುವ ಕುರಿತ ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ. ಸದ್ಯ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>