<p><strong>ಮುಂಬೈ:</strong> ಹಾಲು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ಇದೇ 1ರಿಂದ ಮಹಾರಾಷ್ಟ್ರದ ಹಾಲು ಉತ್ಪಾದಕರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.</p>.<p>ಅಖಿಲ ಭಾರತ ಕಿಸಾನ್ ಸಭಾ, ಸ್ವಾಭಿಮಾನಿ ಶೆತ್ಕಾರಿ ಸಂಘಟನೆ, ಧೂದ ಉತ್ಪಾದಕ ಶೆತ್ಕಾರಿ ಸಂಘರ್ಷ ಸಮಿತಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ.</p>.<p>ಜುಲೈ ತಿಂಗಳಲ್ಲಿ ರಾಜ್ಯದ ವಿವಿಧೆಡೆ ಉತ್ಪಾದಕರು ಪ್ರತಿಭಟನೆ ನಡೆಸಿದರೂ ರಾಜ್ಯ ಸರ್ಕಾರ ಉತ್ಪಾದಕರ ಬೇಡಿಕೆಗೆ ಸ್ಪಂದಿಸಿಲ್ಲ.ಡೇರಿಗಳು ಲೀಟರ್ ಹಾಲಿಗೆ ₹ 16–18 ಬದಲಾಗಿ ₹ 30 ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>‘ಗ್ರಾಹಕರಿಗೆ ಲೀಟರ್ ಹಾಲಿಗೆ ₹ 48ಗೆ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಸರ್ಕಾರ ಉತ್ಪಾದಕರಿಗೆ ₹ 10 ಸಬ್ಸಿಡಿ ನೀಡಬೇಕು’ ಎಂದು ಎಐಕೆಎಸ್ ಅಧ್ಯಕ್ಷ ಅಶೋಕ್ ದಾವಳೆಒತ್ತಾಯಿಸಿದ್ದಾರೆ.</p>.<p>‘10 ಲಕ್ಷ ಟನ್ ಹಾಲಿನ ಪೌಡರ್ ಆಮದು ಮಾಡಿಕೊಳ್ಳಲು ಜೂನ್ 26ರಂದು ಹೊರಡಿಸಿರುವ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕು. ಔಷಧಗಳ ರಫ್ತಿಗೆ ಪ್ರತಿಯಾಗಿ ಅಮೆರಿಕದಿಂದ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಇದನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಹಾಲು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ಇದೇ 1ರಿಂದ ಮಹಾರಾಷ್ಟ್ರದ ಹಾಲು ಉತ್ಪಾದಕರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.</p>.<p>ಅಖಿಲ ಭಾರತ ಕಿಸಾನ್ ಸಭಾ, ಸ್ವಾಭಿಮಾನಿ ಶೆತ್ಕಾರಿ ಸಂಘಟನೆ, ಧೂದ ಉತ್ಪಾದಕ ಶೆತ್ಕಾರಿ ಸಂಘರ್ಷ ಸಮಿತಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ.</p>.<p>ಜುಲೈ ತಿಂಗಳಲ್ಲಿ ರಾಜ್ಯದ ವಿವಿಧೆಡೆ ಉತ್ಪಾದಕರು ಪ್ರತಿಭಟನೆ ನಡೆಸಿದರೂ ರಾಜ್ಯ ಸರ್ಕಾರ ಉತ್ಪಾದಕರ ಬೇಡಿಕೆಗೆ ಸ್ಪಂದಿಸಿಲ್ಲ.ಡೇರಿಗಳು ಲೀಟರ್ ಹಾಲಿಗೆ ₹ 16–18 ಬದಲಾಗಿ ₹ 30 ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<p>‘ಗ್ರಾಹಕರಿಗೆ ಲೀಟರ್ ಹಾಲಿಗೆ ₹ 48ಗೆ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಸರ್ಕಾರ ಉತ್ಪಾದಕರಿಗೆ ₹ 10 ಸಬ್ಸಿಡಿ ನೀಡಬೇಕು’ ಎಂದು ಎಐಕೆಎಸ್ ಅಧ್ಯಕ್ಷ ಅಶೋಕ್ ದಾವಳೆಒತ್ತಾಯಿಸಿದ್ದಾರೆ.</p>.<p>‘10 ಲಕ್ಷ ಟನ್ ಹಾಲಿನ ಪೌಡರ್ ಆಮದು ಮಾಡಿಕೊಳ್ಳಲು ಜೂನ್ 26ರಂದು ಹೊರಡಿಸಿರುವ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ವಾಪಸ್ ಪಡೆಯಬೇಕು. ಔಷಧಗಳ ರಫ್ತಿಗೆ ಪ್ರತಿಯಾಗಿ ಅಮೆರಿಕದಿಂದ ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಇದನ್ನು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>