<p><strong>ನವದೆಹಲಿ:</strong> ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಸದ್ಯ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟದ ಜತೆ ಬೆಳಗ್ಗೆ ಉಪಾಹಾರವನ್ನು ಸಹ ಒದಗಿಸಬೇಕು ಎಂದು ನೂತನ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಪೌಷ್ಟಿಕ ಆಹಾರವುಳ್ಳ ಉಪಾಹಾರ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಉತ್ತಮ. ಅಪೌಷ್ಟಿಕತೆಯಿಂದ ಬಳಲುವವರು ಅಥವಾ ಅನಾರೋಗ್ಯದಿಂದ ಇದ್ದರೆ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯುತ್ತಾರೆ. ಹೀಗಾಗಿ, ಪೌಷ್ಟಿಕತೆ ಮತ್ತು ಆರೋಗ್ಯದ ಬಗ್ಗೆ ಗಮನಹರಿಸಬೇಕಾಗಿದೆ ಎಂದು ನೀತಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಬೆಳಗಿನ ಸಮಯದಲ್ಲಿ ಪೌಷ್ಟಿಕಾಂಶಗಳಿರುವ ಉಪಾಹಾರ ಸೇವಿಸುವುದರಿಂದ ಕಲಿಕೆಯಲ್ಲಿ ಉತ್ತಮ ಪ್ರಗತಿ ಸಾಧಿಸಬಹುದು ಎಂದು ಸಂಶೋಧನೆಗಳು ತಿಳಿಸಿವೆ. ಮಕ್ಕಳು ಬೆಳಗಿನ ಜಾವ ಶಾಲೆಯಲ್ಲಿ ಹಸಿವಿನಿಂದ ಇದ್ದರೆ ಕಲಿಕೆಯಲ್ಲಿ ಆಸಕ್ತಿ ತೋರುವುದಿಲ್ಲ. ಹೀಗಾಗಿ, ಈ ಯೋಜನೆ ಜಾರಿಗೊಳಿಸಬಹುದು ಎಂದು ತಿಳಿಸಿದೆ.</p>.<p>ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಲು ಅತ್ಯುತ್ತಮ ತರಬೇತಿ ಪಡೆದ ಸಾಮಾಜಿಕ ಕಾರ್ಯಕರ್ತರು, ಸಮಾಲೋಚಕರು ಮತ್ತು ಸಮುದಾಯದಲ್ಲಿ ಕ್ರಿಯಾಶೀಲವಾಗಿ ಭಾಗಿಯಾದವರನ್ನು ಶಾಲೆಯ ಆಡಳಿತ ವ್ಯವಸ್ಥೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.</p>.<p>ಬಿಸಿಯೂಟ ಒದಗಿಸಲು ಸಾಧ್ಯವಿಲ್ಲದ ಸ್ಥಳಗಳಲ್ಲಿ ಸಾದಾ ಆಹಾರ ಒದಗಿಸಬಹುದು. ಅದರೆ, ಪೌಷ್ಟಿಕಾಂಶಗಳಿಂದ ಕೂಡಿರಬೇಕು. ಬೆಲ್ಲದ ಜತೆ ಶೇಂಗಾ ಹಾಗೂ ಸ್ಥಳೀಯ ಹಣ್ಣುಗಳನ್ನು ಒದಗಿಸಬೇಕು ಎಂದು ಪ್ರಸ್ತಾಪಿಸಲಾಗಿದೆ.</p>.<p>ಕೇಂದ್ರ ಸಚಿವ ಸಂಪುಟ ಹೊಸ ಶಿಕ್ಷಣ ನೀತಿಗೆ ಕಳೆದ ವಾರ ಅನುಮೋದನೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಸದ್ಯ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟದ ಜತೆ ಬೆಳಗ್ಗೆ ಉಪಾಹಾರವನ್ನು ಸಹ ಒದಗಿಸಬೇಕು ಎಂದು ನೂತನ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ.</p>.<p>ಪೌಷ್ಟಿಕ ಆಹಾರವುಳ್ಳ ಉಪಾಹಾರ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಉತ್ತಮ. ಅಪೌಷ್ಟಿಕತೆಯಿಂದ ಬಳಲುವವರು ಅಥವಾ ಅನಾರೋಗ್ಯದಿಂದ ಇದ್ದರೆ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯುತ್ತಾರೆ. ಹೀಗಾಗಿ, ಪೌಷ್ಟಿಕತೆ ಮತ್ತು ಆರೋಗ್ಯದ ಬಗ್ಗೆ ಗಮನಹರಿಸಬೇಕಾಗಿದೆ ಎಂದು ನೀತಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಬೆಳಗಿನ ಸಮಯದಲ್ಲಿ ಪೌಷ್ಟಿಕಾಂಶಗಳಿರುವ ಉಪಾಹಾರ ಸೇವಿಸುವುದರಿಂದ ಕಲಿಕೆಯಲ್ಲಿ ಉತ್ತಮ ಪ್ರಗತಿ ಸಾಧಿಸಬಹುದು ಎಂದು ಸಂಶೋಧನೆಗಳು ತಿಳಿಸಿವೆ. ಮಕ್ಕಳು ಬೆಳಗಿನ ಜಾವ ಶಾಲೆಯಲ್ಲಿ ಹಸಿವಿನಿಂದ ಇದ್ದರೆ ಕಲಿಕೆಯಲ್ಲಿ ಆಸಕ್ತಿ ತೋರುವುದಿಲ್ಲ. ಹೀಗಾಗಿ, ಈ ಯೋಜನೆ ಜಾರಿಗೊಳಿಸಬಹುದು ಎಂದು ತಿಳಿಸಿದೆ.</p>.<p>ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಲು ಅತ್ಯುತ್ತಮ ತರಬೇತಿ ಪಡೆದ ಸಾಮಾಜಿಕ ಕಾರ್ಯಕರ್ತರು, ಸಮಾಲೋಚಕರು ಮತ್ತು ಸಮುದಾಯದಲ್ಲಿ ಕ್ರಿಯಾಶೀಲವಾಗಿ ಭಾಗಿಯಾದವರನ್ನು ಶಾಲೆಯ ಆಡಳಿತ ವ್ಯವಸ್ಥೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.</p>.<p>ಬಿಸಿಯೂಟ ಒದಗಿಸಲು ಸಾಧ್ಯವಿಲ್ಲದ ಸ್ಥಳಗಳಲ್ಲಿ ಸಾದಾ ಆಹಾರ ಒದಗಿಸಬಹುದು. ಅದರೆ, ಪೌಷ್ಟಿಕಾಂಶಗಳಿಂದ ಕೂಡಿರಬೇಕು. ಬೆಲ್ಲದ ಜತೆ ಶೇಂಗಾ ಹಾಗೂ ಸ್ಥಳೀಯ ಹಣ್ಣುಗಳನ್ನು ಒದಗಿಸಬೇಕು ಎಂದು ಪ್ರಸ್ತಾಪಿಸಲಾಗಿದೆ.</p>.<p>ಕೇಂದ್ರ ಸಚಿವ ಸಂಪುಟ ಹೊಸ ಶಿಕ್ಷಣ ನೀತಿಗೆ ಕಳೆದ ವಾರ ಅನುಮೋದನೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>