ಸಿಮೆಂಟ್, ರಸಗೊಬ್ಬರ, ಧಾನ್ಯ ಮತ್ತು ಇತರೆ ಸರಕುಗಳನ್ನು ಲೋಡ್ ಮತ್ತು ಅನ್ಲೋಡ್ ಮಾಡುವಾಗ ವಾಯುಮಾಲಿನ್ಯವಾಗುತ್ತಿದೆ. ಇದರಿಂದ ಸ್ಥಳೀಯರಿಗೆ ಉಸಿರಾಟದ ಸಮಸ್ಯೆ ಎದುರಾಗುತ್ತಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ರೈಲ್ವೆ ಇಲಾಖೆಯು ಕೈಗೊಂಡಿರುವ ಕ್ರಮ ತಾಂತ್ರಿಕವಾಗಿ ಸಮರ್ಪಕವಾಗಿಲ್ಲ. ಹಾಗಾಗಿ, ವಾಯುಮಾಲಿನ್ಯ ಹೆಚ್ಚುತ್ತಲೇ ಇದೆ’ ಎಂದುಉತ್ತರಪ್ರದೇಶದ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ನೀಡಿತ್ತು.