<p><strong>ಗುವಾಹಟಿ:</strong> ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದಾಗಿ 30 ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯಾಗಿದ್ದು, 56 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 102 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.</p>.<p>ಪ್ರವಾಹ ಸಂತ್ರಸ್ತರಿಗಾಗಿ 615 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನ ಹಾಗೂ ಹುಲಿ ಸಂರಕ್ಷಿತರಾಣ್ಯ ಪ್ರದೇಶದಲ್ಲಿ 132 ಪ್ರಾಣಿಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ.</p>.<p>‘ಪ್ರವಾಹದಲ್ಲಿ ಸಿಲುಕಿ ಕಾಜಿರಂಗ ರಾಷ್ಟ್ರೀಯ ಉದ್ಯಾನ ಹಾಗೂ ಹುಲಿ ಸಂರಕ್ಷಿತಾರಣ್ಯದ132 ಪ್ರಾಣಿಗಳು ಮೃತಪಟ್ಟಿವೆ. ಇದರಲ್ಲಿ 14 ಘೇಂಡಾಮೃಗಗಳು, 5 ಕಾಡು ಎಮ್ಮೆಗಳು, 8 ಕಾಡುಹಂದಿಗಳು, 101 ಜಿಂಕೆಗಳು, ಮೂರು ಮುಳ್ಳುಹಂದಿಗಳು ಹಾಗೂ 1 ಹೆಬ್ಬಾವು ಮೃತಪಟ್ಟಿವೆ’ ಎಂದು ಅಸ್ಸಾಂ ಸರ್ಕಾರ ಮಾಹಿತಿ ನೀಡಿದೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ (ಎನ್ಡಿಆರ್ಎಫ್) ಒಂದು ತಂಡ ಪ್ರವಾಹ ಪೀಡಿತ ಬಾರ್ಪೆಟಾ ಜಿಲ್ಲೆಯ ದಿಘಿರ್ಪಾಮ್ ಬಜಾರ್ ಪ್ರದೇಶದಿಂದ ಜನ–ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಭಾನುವಾರ ಸ್ಥಳಾಂತರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದಾಗಿ 30 ಜಿಲ್ಲೆಗಳಲ್ಲಿ ಸಾಕಷ್ಟು ಹಾನಿಯಾಗಿದ್ದು, 56 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 102 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.</p>.<p>ಪ್ರವಾಹ ಸಂತ್ರಸ್ತರಿಗಾಗಿ 615 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನ ಹಾಗೂ ಹುಲಿ ಸಂರಕ್ಷಿತರಾಣ್ಯ ಪ್ರದೇಶದಲ್ಲಿ 132 ಪ್ರಾಣಿಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ.</p>.<p>‘ಪ್ರವಾಹದಲ್ಲಿ ಸಿಲುಕಿ ಕಾಜಿರಂಗ ರಾಷ್ಟ್ರೀಯ ಉದ್ಯಾನ ಹಾಗೂ ಹುಲಿ ಸಂರಕ್ಷಿತಾರಣ್ಯದ132 ಪ್ರಾಣಿಗಳು ಮೃತಪಟ್ಟಿವೆ. ಇದರಲ್ಲಿ 14 ಘೇಂಡಾಮೃಗಗಳು, 5 ಕಾಡು ಎಮ್ಮೆಗಳು, 8 ಕಾಡುಹಂದಿಗಳು, 101 ಜಿಂಕೆಗಳು, ಮೂರು ಮುಳ್ಳುಹಂದಿಗಳು ಹಾಗೂ 1 ಹೆಬ್ಬಾವು ಮೃತಪಟ್ಟಿವೆ’ ಎಂದು ಅಸ್ಸಾಂ ಸರ್ಕಾರ ಮಾಹಿತಿ ನೀಡಿದೆ.</p>.<p>ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ (ಎನ್ಡಿಆರ್ಎಫ್) ಒಂದು ತಂಡ ಪ್ರವಾಹ ಪೀಡಿತ ಬಾರ್ಪೆಟಾ ಜಿಲ್ಲೆಯ ದಿಘಿರ್ಪಾಮ್ ಬಜಾರ್ ಪ್ರದೇಶದಿಂದ ಜನ–ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಭಾನುವಾರ ಸ್ಥಳಾಂತರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>