<p><strong>ಚೆನ್ನೈ: </strong>ಚೆನ್ನೈನಲ್ಲಿ ಜುಲೈ 6ರಿಂದ ಲಾಕ್ಡೌನ್ ಸಡಿಲಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಘೋಷಿಸಿದ್ದಾರೆ. ಜೊತೆಗೆ ನಗರದ ಎಲ್ಲ ತರಕಾರಿ ಮತ್ತು ದಿನಸಿ ಅಂಗಡಿಗಳನ್ನು 12 ಗಂಟೆ ಕಾಲ ತೆರೆಯಲಾಗುವುದು ಎಂದು ತಿಳಿಸಿದ್ದಾರೆ</p>.<p>‘ಚೆನ್ನೈನಲ್ಲಿ ಲಾಕ್ಡೌನ್ ಸಡಿಲಿಕೆ ಜುಲೈ 6ರಿಂದ ಜಾರಿಗೆ ಬರಲಿದೆ. ತರಕಾರಿ ಮತ್ತು ದಿನಸಿ ಅಂಗಡಿಗಳು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ತೆರೆಯಲು ಅವಕಾಶವಿರುತ್ತದೆ. ಹಾರ್ಡ್ವೇರ್ ಶಾಪ್ಗಳು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಮತ್ತು ರೆಸ್ಟೋರೆಂಟ್ಗಳು ಬೆಳಗ್ಗೆ 6ರಿಂದ ರಾತ್ರಿ 9ರ ವರೆಗೆ ತೆರೆದಿರಲಿವೆ’ ಎಂದು ತಿಳಿಸಿದ್ದಾರೆ.</p>.<p>ತಮಿಳುನಾಡಿನಲ್ಲಿ ಕೋವಿಡ್–19 ಸೋಂಕು ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದ ಕಾರಣ ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂನಲ್ಲಿ ಜೂನ್ 19ರಿಂದ ಸಂಪೂರ್ಣಲಾಕ್ಡೌನ್ ಘೋಷಿಸಲಾಗಿತ್ತು. ತಮಿಳುನಾಡಿನಲ್ಲಿ ಇದುವರೆಗೆ 1,02,721 ಜನರಲ್ಲಿ ಸೋಂಕು ಇರುವುದು ಖಚಿತವಾಗಿದೆ. ಇದರಲ್ಲಿ 1,385 ಸೋಂಕಿತರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಚೆನ್ನೈನಲ್ಲಿ ಜುಲೈ 6ರಿಂದ ಲಾಕ್ಡೌನ್ ಸಡಿಲಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಘೋಷಿಸಿದ್ದಾರೆ. ಜೊತೆಗೆ ನಗರದ ಎಲ್ಲ ತರಕಾರಿ ಮತ್ತು ದಿನಸಿ ಅಂಗಡಿಗಳನ್ನು 12 ಗಂಟೆ ಕಾಲ ತೆರೆಯಲಾಗುವುದು ಎಂದು ತಿಳಿಸಿದ್ದಾರೆ</p>.<p>‘ಚೆನ್ನೈನಲ್ಲಿ ಲಾಕ್ಡೌನ್ ಸಡಿಲಿಕೆ ಜುಲೈ 6ರಿಂದ ಜಾರಿಗೆ ಬರಲಿದೆ. ತರಕಾರಿ ಮತ್ತು ದಿನಸಿ ಅಂಗಡಿಗಳು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ತೆರೆಯಲು ಅವಕಾಶವಿರುತ್ತದೆ. ಹಾರ್ಡ್ವೇರ್ ಶಾಪ್ಗಳು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಮತ್ತು ರೆಸ್ಟೋರೆಂಟ್ಗಳು ಬೆಳಗ್ಗೆ 6ರಿಂದ ರಾತ್ರಿ 9ರ ವರೆಗೆ ತೆರೆದಿರಲಿವೆ’ ಎಂದು ತಿಳಿಸಿದ್ದಾರೆ.</p>.<p>ತಮಿಳುನಾಡಿನಲ್ಲಿ ಕೋವಿಡ್–19 ಸೋಂಕು ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದ ಕಾರಣ ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂನಲ್ಲಿ ಜೂನ್ 19ರಿಂದ ಸಂಪೂರ್ಣಲಾಕ್ಡೌನ್ ಘೋಷಿಸಲಾಗಿತ್ತು. ತಮಿಳುನಾಡಿನಲ್ಲಿ ಇದುವರೆಗೆ 1,02,721 ಜನರಲ್ಲಿ ಸೋಂಕು ಇರುವುದು ಖಚಿತವಾಗಿದೆ. ಇದರಲ್ಲಿ 1,385 ಸೋಂಕಿತರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>