ಕಳೆದ ವಾರ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬಿಕ್ರು ಗ್ರಾಮಕ್ಕೆ ದುಬೆಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಈತ ಮತ್ತು ಈತನ ಸಹಚರರು ಗುಂಡಿನ ದಾಳಿ ನಡೆಸಿದ್ದರು. ಈ ದುರ್ಘಟನೆಯಲ್ಲಿ ಡಿವೈಎಸ್ಪಿ ಸೇರಿದಂತೆ ಎಂಟು ಪೊಲೀಸರು ಹತ್ಯೆಯಾಗಿದ್ದರು. ದುಬೆನನ್ನು ಬಂಧಿಸಲು ಮಾಹಿತಿ ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಈತನ ಬೆನ್ನು ಬಿದ್ದಿದ್ದ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ವಿಕಾಸ್ ದುಬೆಯನ್ನು ಎನ್ಕೌಂಟರ್ ಮೂಲಕ ಹತ್ಯೆ ಮಾಡಿದ್ದರು.