‘ಐದು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದ ನಾಯಕರು ಹಾಗೂ ಕಾರ್ಯಕರ್ತರನ್ನು ಗೆಹ್ಲೊಟ್ ಕಡೆಗಣಿಸಿದ್ದಾರೆ. ಕಾಂಗ್ರೆಸ್ಗೆ ವೋಟ್ ನೀಡುತ್ತಲೆ ಬಂದಿರುವ, ಪೂರ್ವ ರಾಜಸ್ಥಾನದ ಕೆಲವು ಸಮುದಾಯಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಅವರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಿಲ್ಲ. ಪಕ್ಷವನ್ನು ಉಳಿಸಬೇಕಾದರೆ ಕೆಲವು ಸುಧಾರಣೆಗಳನ್ನು ಮಾಡುವುದು ಅಗತ್ಯ. ಇಲ್ಲವಾದಲ್ಲಿ 2023ರ ಚುನಾವಣೆಯಲ್ಲಿ 11 ಸ್ಥಾನಗಳನ್ನು ಗೆಲ್ಲಲೂ ಸಾಧ್ಯವಾಗಲಾರರು ಎಂದು ಮೀನಾ ಅವರು ಟ್ವೀಟ್ ಮಾಡಿದ್ದಾರೆ.