ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಅಂಕಿಅಂಶ ಮುಚ್ಚಿಡಲು ಯತ್ನಿಸಿದ್ದ ಪಿಣರಾಯಿ ವಿಜಯನ್ ಸರ್ಕಾರ: ನಡ್ಡಾ

Last Updated 12 ಜುಲೈ 2020, 8:14 IST
ಅಕ್ಷರ ಗಾತ್ರ

ನವದೆಹಲಿ: ಕೇರಳದ ಪಿಣರಾಯಿ ವಿಜಯನ್ ಸರ್ಕಾರವು ಕೋವಿಡ್–19 ಅಂಕಿಅಂಶಗಳನ್ನು ಮುಚ್ಚಿಡಲು ಯತ್ನಿಸಿತ್ತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆರೋಪಿಸಿದ್ದಾರೆ.

ಕೊರೊನಾ ಬಿಕ್ಕಟ್ಟನ್ನು ಪಿಣರಾಯಿ ಸರ್ಕಾರ ಗೊಂದಲಮಯವಾಗಿಸಿದೆ. ನಾವು ಪರೀಕ್ಷೆಗಳನ್ನು ಹೆಚ್ಚಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ವೈದ್ಯರು ಹೇಳುತ್ತಲೇ ಇದ್ದರೂ ರಾಜ್ಯ ಸರ್ಕಾರದ ಧೋರಣೆ ನಕಾರಾತ್ಮಕವಾಗಿತ್ತು ಎಂದು ನಡ್ಡಾ ಹೇಳಿದ್ದಾರೆ.

ಚಿನ್ನ ಕಳ್ಳಸಾಗಣಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಕಚೇರಿ ನಂಟುಹೊಂದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ನಡ್ಡಾ, ‘ಚಿನ್ನದ ಬಣ್ಣ ಎಲ್ಲ ಕಡೆ ಹಳದಿಯಾಗಿದೆ. ಆದರೆ ಕೇರಳದಲ್ಲಿ ಕೆಂಪು ಆಗಿದೆ. ಐಟಿ ಅಧಿಕಾರಿ ಮತ್ತು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ನಡುವಣ ಸಂಬಂಧವೇನು’ ಎಂದು ನಡ್ಡಾ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT