<p><strong>ನವದೆಹಲಿ</strong>: ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್ಎಲ್ಎಸ್ಐಯು) ಸ್ಥಳೀಯರಿಗೆ ಶೇಕಡ 25ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.</p>.<p>ಗುರುವಾರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರಿದ್ದ ಪೀಠ, ಪ್ರಕರಣದ ವಿಚಾರಣೆಯನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸುವಂತೆ ನಿರ್ದೇಶಿಸಿತು.</p>.<p>ಈ ಪ್ರಕರಣವು ವಿಚಾರಣೆಗೆ ಬಂದಾಗ ಅರ್ಜಿದಾರರ ಪರ ವಕೀಲರು, ‘ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಜಾರಿಗೆ ತಂದಿದ್ದ ಇದೇ ರೀತಿಯ ಮೀಸಲಾತಿ ಸೌಲಭ್ಯವನ್ನು ಇನ್ನೊಂದು ಪೀಠ ಇತ್ತೀಚೆಗೆ ತಡೆಹಿಡಿದಿತ್ತು’ ಎಂದು ವಿವರಿಸಿದರು.</p>.<p>ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಸ್ಥಳೀಯರಿಗೆ ಮೀಸಲಾತಿ ಸಂಬಂಧಿತ ತಿದ್ದುಪಡಿ ಮಸೂದೆಗೆ 2020 ಮಾರ್ಚ್ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿದ್ದು, ಕಳೆದ ಮೇ ತಿಂಗಳಲ್ಲಿ ಮಸೂದೆಗೆರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್ಎಲ್ಎಸ್ಐಯು) ಸ್ಥಳೀಯರಿಗೆ ಶೇಕಡ 25ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ದೆಹಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.</p>.<p>ಗುರುವಾರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರಿದ್ದ ಪೀಠ, ಪ್ರಕರಣದ ವಿಚಾರಣೆಯನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸುವಂತೆ ನಿರ್ದೇಶಿಸಿತು.</p>.<p>ಈ ಪ್ರಕರಣವು ವಿಚಾರಣೆಗೆ ಬಂದಾಗ ಅರ್ಜಿದಾರರ ಪರ ವಕೀಲರು, ‘ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಜಾರಿಗೆ ತಂದಿದ್ದ ಇದೇ ರೀತಿಯ ಮೀಸಲಾತಿ ಸೌಲಭ್ಯವನ್ನು ಇನ್ನೊಂದು ಪೀಠ ಇತ್ತೀಚೆಗೆ ತಡೆಹಿಡಿದಿತ್ತು’ ಎಂದು ವಿವರಿಸಿದರು.</p>.<p>ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ ಸ್ಥಳೀಯರಿಗೆ ಮೀಸಲಾತಿ ಸಂಬಂಧಿತ ತಿದ್ದುಪಡಿ ಮಸೂದೆಗೆ 2020 ಮಾರ್ಚ್ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿದ್ದು, ಕಳೆದ ಮೇ ತಿಂಗಳಲ್ಲಿ ಮಸೂದೆಗೆರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>