<p class="title"><strong>ನವದೆಹಲಿ:</strong>ದೆಹಲಿಯಲ್ಲಿ ಕೋವಿಡ್–19 ನಿರ್ವಹಿಸುವಲ್ಲಿ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಅಧಿಕಾರಿಗಳ ಕಾರ್ಯವನ್ನು ಪ್ರಧಾನಿ ನರೇಂದ್ರಮೋದಿ ಶ್ಲಾಘಿಸಿದ್ದು, ರಾಷ್ಟ್ರೀಯ ರಾಜಧಾನಿಯ ಇತರೆ ಪ್ರದೇಶಗಳಲ್ಲಿಯೂ ಇದೇ ಮಾದರಿ ವಿಧಾನವನ್ನು ಅನುಸರಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.</p>.<p>ಸೋಂಕು ವ್ಯಾಪಕವಾಗಿರುವ ರಾಜ್ಯ ಮತ್ತು ಪ್ರದೇಶಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿನ ನೈಜ ಪ್ರಕರಣಗಳ ನಿರ್ವಹಣೆ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಮೋದಿ ನಿರ್ದೇಶನ ನೀಡಿದರು.</p>.<p>ದೇಶದ ವಿವಿಧ ಭಾಗಗಳಲ್ಲಿನ ಕೋವಿಡ್–19 ಪರಿಸ್ಥಿತಿ ಮತ್ತು ಬಿಕ್ಕಟ್ಟು ಎದುರಿಸಲು ರಾಜ್ಯಗಳು ನಡೆಸಿರುವ ಸಿದ್ಧತೆಯ ಕುರಿತು ನಡೆಸಿದಪರಿಶೀಲನಾಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.</p>.<p>ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಮತ್ತು ಸಾಮಾಜಿಕ ಶಿಸ್ತು ಪಾಲಿಸುವ ಅಗತ್ಯವನ್ನು ಪ್ರಧಾನಿ ಈ ಸಂದರ್ಭದಲ್ಲಿ ಪುನರುಚ್ಚರಿಸಿದ್ಧಾರೆ.</p>.<p>ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷ ವರ್ಧನ್ ಮತ್ತು ಮತ್ತು ಕ್ಯಾಬಿನೆಟ್ ಕಾರ್ಯದರ್ಶಿ ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>ದೆಹಲಿಯಲ್ಲಿ ಕೋವಿಡ್–19 ನಿರ್ವಹಿಸುವಲ್ಲಿ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಅಧಿಕಾರಿಗಳ ಕಾರ್ಯವನ್ನು ಪ್ರಧಾನಿ ನರೇಂದ್ರಮೋದಿ ಶ್ಲಾಘಿಸಿದ್ದು, ರಾಷ್ಟ್ರೀಯ ರಾಜಧಾನಿಯ ಇತರೆ ಪ್ರದೇಶಗಳಲ್ಲಿಯೂ ಇದೇ ಮಾದರಿ ವಿಧಾನವನ್ನು ಅನುಸರಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.</p>.<p>ಸೋಂಕು ವ್ಯಾಪಕವಾಗಿರುವ ರಾಜ್ಯ ಮತ್ತು ಪ್ರದೇಶಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿನ ನೈಜ ಪ್ರಕರಣಗಳ ನಿರ್ವಹಣೆ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಮೋದಿ ನಿರ್ದೇಶನ ನೀಡಿದರು.</p>.<p>ದೇಶದ ವಿವಿಧ ಭಾಗಗಳಲ್ಲಿನ ಕೋವಿಡ್–19 ಪರಿಸ್ಥಿತಿ ಮತ್ತು ಬಿಕ್ಕಟ್ಟು ಎದುರಿಸಲು ರಾಜ್ಯಗಳು ನಡೆಸಿರುವ ಸಿದ್ಧತೆಯ ಕುರಿತು ನಡೆಸಿದಪರಿಶೀಲನಾಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.</p>.<p>ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಮತ್ತು ಸಾಮಾಜಿಕ ಶಿಸ್ತು ಪಾಲಿಸುವ ಅಗತ್ಯವನ್ನು ಪ್ರಧಾನಿ ಈ ಸಂದರ್ಭದಲ್ಲಿ ಪುನರುಚ್ಚರಿಸಿದ್ಧಾರೆ.</p>.<p>ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷ ವರ್ಧನ್ ಮತ್ತು ಮತ್ತು ಕ್ಯಾಬಿನೆಟ್ ಕಾರ್ಯದರ್ಶಿ ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>