<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ದೂರವಾಣಿ ಮೂಲಕ ಮಾತುಕತೆ ನಡೆಸಿ ಕೋವಿಡ್ ಬಿಕ್ಕಟ್ಟು ಕುರಿತು ಸಮಾಲೋಚನೆ ನಡೆಸಿದರು.</p>.<p>ಕೋವಿಡ್ ನಿಯಂತ್ರಿಸಿದ ಬಳಿಕ ಜಗತ್ತಿನಲ್ಲಿ ಎದುರಾಗುವ ಸವಾಲುಗಳನ್ನು ಜಂಟಿಯಾಗಿ ಎದುರಿಸುವ ನಿಟ್ಟಿನಲ್ಲಿ ಉಭಯ ನಾಯಕರು ಚರ್ಚಿಸಿದರು ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.</p>.<p>‘ಅಧ್ಯಕ್ಷ ಪುಟಿನ್ ಮತ್ತು ನಾನು ನಿರಂತರ ಸಮಾಲೋಚನೆ ನಡೆಸಲು ನಿರ್ಧರಿಸಿದ್ದೇವೆ. ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪುಟಿನ್ ಅವರು ಭಾರತಕ್ಕೆ ಆಗಮಿಸಲಿದ್ದಾರೆ’ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.</p>.<p><strong>ಸ್ಮಾರಕಗಳು ವೀಕ್ಷಣೆಗೆ ಮುಕ್ತ</strong><br /><strong>ನವದೆಹಲಿ (ಪಿಟಿಐ):</strong> ಆಗ್ರಾದ ತಾಜ್ಮಹಲ್, ದೆಹಲಿಯ ಕೆಂಪುಕೋಟೆ ಸೇರಿದಂತೆ ದೇಶದ ಪ್ರಮುಖ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಸೋಮವಾರದಿಂದ (ಜುಲೈ 6) ತೆರೆಯಲಿವೆ. ಭಾರತೀಯ ಪುರಾತತ್ವ ಸಂಸ್ಥೆಯ (ಎಎಸ್ಐ) ಉಸ್ತುವಾರಿಯಲ್ಲಿರುವ ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ತೆರೆಯಲಿವೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.</p>.<p>ಪ್ರವಾಸಿಗರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ದೂರವಾಣಿ ಮೂಲಕ ಮಾತುಕತೆ ನಡೆಸಿ ಕೋವಿಡ್ ಬಿಕ್ಕಟ್ಟು ಕುರಿತು ಸಮಾಲೋಚನೆ ನಡೆಸಿದರು.</p>.<p>ಕೋವಿಡ್ ನಿಯಂತ್ರಿಸಿದ ಬಳಿಕ ಜಗತ್ತಿನಲ್ಲಿ ಎದುರಾಗುವ ಸವಾಲುಗಳನ್ನು ಜಂಟಿಯಾಗಿ ಎದುರಿಸುವ ನಿಟ್ಟಿನಲ್ಲಿ ಉಭಯ ನಾಯಕರು ಚರ್ಚಿಸಿದರು ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.</p>.<p>‘ಅಧ್ಯಕ್ಷ ಪುಟಿನ್ ಮತ್ತು ನಾನು ನಿರಂತರ ಸಮಾಲೋಚನೆ ನಡೆಸಲು ನಿರ್ಧರಿಸಿದ್ದೇವೆ. ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪುಟಿನ್ ಅವರು ಭಾರತಕ್ಕೆ ಆಗಮಿಸಲಿದ್ದಾರೆ’ ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.</p>.<p><strong>ಸ್ಮಾರಕಗಳು ವೀಕ್ಷಣೆಗೆ ಮುಕ್ತ</strong><br /><strong>ನವದೆಹಲಿ (ಪಿಟಿಐ):</strong> ಆಗ್ರಾದ ತಾಜ್ಮಹಲ್, ದೆಹಲಿಯ ಕೆಂಪುಕೋಟೆ ಸೇರಿದಂತೆ ದೇಶದ ಪ್ರಮುಖ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಸೋಮವಾರದಿಂದ (ಜುಲೈ 6) ತೆರೆಯಲಿವೆ. ಭಾರತೀಯ ಪುರಾತತ್ವ ಸಂಸ್ಥೆಯ (ಎಎಸ್ಐ) ಉಸ್ತುವಾರಿಯಲ್ಲಿರುವ ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ತೆರೆಯಲಿವೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.</p>.<p>ಪ್ರವಾಸಿಗರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>