ನೊಯ್ಡಾ, ಮುಂಬೈ ಹಾಗೂ ಕೋಲ್ಕತ್ತದಲ್ಲಿ ಕೊರೊನಾ ಪರೀಕ್ಷೆ ಸೌಲಭ್ಯವನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಜಾಗೃತಿಯ ಕೊರತೆಯಿಲ್ಲ. ನಮ್ಮಲ್ಲಿ ವೈಜ್ಞಾನಿಕ ದತ್ತಾಂಶಗಳನ್ನು ವಿಸ್ತರಿಸಲಾಗುತ್ತದೆ ಮತ್ತು ಸಂಪನ್ಮೂಲಗಳೂ ಹೆಚ್ಚುತ್ತಿವೆ ಎಂದು ಹೇಳಿದ್ದಾರೆ.