ನವಿ ಮುಂಬೈನ ತಲೋಜಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇರುವ ವರವರ ರಾವ್ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಕಳೆದ ವಾರವಷ್ಟೇ ಅವರನ್ನು ಮುಂಬೈನ ಜೆ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾವ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದ ಕುಟುಂಬದ ಸದಸ್ಯರು, ‘ಅವರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಅವರು ಇದ್ದ ಆಸ್ಪತ್ರೆಯ ವಾರ್ಡ್ನ ನೆಲದಲ್ಲಿ ಮೂತ್ರ ಹರಿಯುತ್ತಿದೆ. ರಾವ್ ಅವರನ್ನು ನೋಡಿಕೊಳ್ಳಲು ಸಿಬ್ಬಂದಿಯೂ ಇಲ್ಲ’ ಎಂದು ಆರೋಪಿಸಿದ್ದರು.