<p><strong>ನವದೆಹಲಿ: </strong>ರಾಜಕೀಯ ವಲಯದ ಗಣ್ಯರು, ಕುಟುಂಬಸ್ಥರು ಹಾಗೂ ಸಂಬಂಧಿಗಳು ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ಅವರಿಗೆ ಸೋಮವಾರ ಅಂತಿಮ ನಮನ ಸಲ್ಲಿಸಿದರು.</p>.<p>ರಾಜ್ಯಸಭಾ ಸದಸ್ಯರಾಗಿದ್ದ ಅಮರ್ ಸಿಂಗ್ ಅವರು ಎರಡು ದಿನಗಳ ಹಿಂದೆ ಸಿಂಗಪುರದ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದರು.</p>.<p>ಭಾನುವಾರ ಸಂಜೆ ವಿಶೇಷ ವಿಮಾನದಲ್ಲಿ ಅವರಪಾರ್ಥಿವ ಶರೀರವನ್ನು ತರಲಾಗಿದ್ದು, ಇಲ್ಲಿನ ಛಾತರ್ಪುರದಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.</p>.<p>ಛಾತರ್ಪುರದಲ್ಲಿರುವ ಫಾರ್ಮ್ಹೌಸ್ನಲ್ಲಿ ಅಮರ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.</p>.<p>ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ನಟಿ ಜಯಪ್ರದಾ ಅವರು ಅಂತಿಮ ದರ್ಶನ ಪಡೆದರು.</p>.<p>ಅಮರ್ ಅವರ ಪತ್ನಿ ಪಂಕಜಾ ಸಿಂಗ್ ಹಾಗೂ ಇಬ್ಬರು ಪುತ್ರಿಯರು ಈ ವೇಳೆ ಇದ್ದರು.</p>.<p>ಕೋವಿಡ್–19 ಹಿನ್ನೆಲೆಯಲ್ಲಿ ಜನ ಗುಂಪು ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಅಮರ್ ಅವರ ಅಂತ್ಯ ಸಂಸ್ಕಾರದ ವೇಳೆ ಆಯ್ದ ಕೆಲ ವ್ಯಕ್ತಿಗಳು ಮಾತ್ರ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಜಕೀಯ ವಲಯದ ಗಣ್ಯರು, ಕುಟುಂಬಸ್ಥರು ಹಾಗೂ ಸಂಬಂಧಿಗಳು ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ಅವರಿಗೆ ಸೋಮವಾರ ಅಂತಿಮ ನಮನ ಸಲ್ಲಿಸಿದರು.</p>.<p>ರಾಜ್ಯಸಭಾ ಸದಸ್ಯರಾಗಿದ್ದ ಅಮರ್ ಸಿಂಗ್ ಅವರು ಎರಡು ದಿನಗಳ ಹಿಂದೆ ಸಿಂಗಪುರದ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದರು.</p>.<p>ಭಾನುವಾರ ಸಂಜೆ ವಿಶೇಷ ವಿಮಾನದಲ್ಲಿ ಅವರಪಾರ್ಥಿವ ಶರೀರವನ್ನು ತರಲಾಗಿದ್ದು, ಇಲ್ಲಿನ ಛಾತರ್ಪುರದಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.</p>.<p>ಛಾತರ್ಪುರದಲ್ಲಿರುವ ಫಾರ್ಮ್ಹೌಸ್ನಲ್ಲಿ ಅಮರ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.</p>.<p>ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ನಟಿ ಜಯಪ್ರದಾ ಅವರು ಅಂತಿಮ ದರ್ಶನ ಪಡೆದರು.</p>.<p>ಅಮರ್ ಅವರ ಪತ್ನಿ ಪಂಕಜಾ ಸಿಂಗ್ ಹಾಗೂ ಇಬ್ಬರು ಪುತ್ರಿಯರು ಈ ವೇಳೆ ಇದ್ದರು.</p>.<p>ಕೋವಿಡ್–19 ಹಿನ್ನೆಲೆಯಲ್ಲಿ ಜನ ಗುಂಪು ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಅಮರ್ ಅವರ ಅಂತ್ಯ ಸಂಸ್ಕಾರದ ವೇಳೆ ಆಯ್ದ ಕೆಲ ವ್ಯಕ್ತಿಗಳು ಮಾತ್ರ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>