ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿಶೀಟರ್ ದುಬೆಗೆ ರಕ್ಷಣೆ ; ಸಿಬಿಐ ತನಿಖೆಯಿಂದ ಸತ್ಯ ಬಹಿರಂಗ: ಪ್ರಿಯಾಂಕಾ ಗಾಂಧಿ

Last Updated 10 ಜುಲೈ 2020, 10:14 IST
ಅಕ್ಷರ ಗಾತ್ರ

ನವದೆಹಲಿ: ರೌಡಿಶೀಟರ್‌ ವಿಕಾಸ್‌ ದುಬೆಗೆ ರಕ್ಷಣೆ ನೀಡಲಾಗಿತ್ತೇ ಎಂಬುದು ಗೊತ್ತಾಗಬೇಕಾದರೆ ಸಿಬಿಐ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಹೇಳಿದ್ದಾರೆ.

ವಿಕಾಸ್ ಹಾಗೂ ಆತನ ಸಹಚರರು ನಡೆಸಿದ ಅಡಗುದಾಳಿ ಪ್ರಕರಣವನ್ನು ನಿಭಾಯಿಸುವಲ್ಲಿ ಉತ್ತರ ಪ್ರದೇಶ ಸರ್ಕಾರ ಸಂಪೂರ್ಣ ವಿಫಲವಾಗಿದೆ. 8 ಜನ ಪೊಲೀಸರ ಹತ್ಯೆ ನಂತರದ ಘಟನಾವಳಿಗಳು ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಜಗಜ್ಜಾಹೀರು ಮಾಡಿವೆ ಎಂದು ಅವರು ಟೀಕಿಸಿದ್ದಾರೆ.

ದುಬೆ ಹಾಗೂ ಆತನ ಸಹಚರರು ಇತ್ತೀಚೆಗೆ ನಡೆಸಿದ ದಾಳಿಯಲ್ಲಿ 8 ಜನ ಪೊಲೀಸರು ಹತರಾಗಿದ್ದರು. ಮುಖ್ಯ ಆರೋಪಿ ದುಬೆನನ್ನು ಗುರುವಾರ ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT