ನವದೆಹಲಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ, ಮುಂದಿನ ತಿಂಗಳ 8ರಂದು ನಡೆಯಬೇಕಿರುವ ಬಿ.ಇಡಿ ಪ್ರವೇಶ ಪರೀಕ್ಷೆಯ ಬಗ್ಗೆ ಮರುಚಿಂತನೆ ನಡೆಸಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಉತ್ತರ ಪ್ರದೇಶದ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆಗಮನಹರಿಸಿದೆ ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಲ್ಲ. ಪರೀಕ್ಷೆ ಬರೆಯಲಿರುವ ಸುಮಾರು 4.5 ಲಕ್ಷ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಸರ್ಕಾರ ಯೋಚಿಸಬೇಕು ಎಂದಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ, ನಿಗದಿಯಂತೆ ಪರೀಕ್ಷೆ ನಡೆಸುವ ಬಗ್ಗೆ ಸರ್ಕಾರ ಮರುಚಿಂತನೆ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.