<p><strong>ಲಖನೌ:</strong> ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ಗಣಿಯಲ್ಲಿ ಕೆಲಸ ಮಾಡುವ ಬಡ, ಅಪ್ರಾಪ್ತ ಬಾಲಕಿಯರ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಶೋಷಣೆಯ ಕುರಿತು ತನಿಖೆ ನಡೆಸಬೇಕೆಂದು ಬುಧವಾರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶೇಷ್ಮಣಿ ಪಾಂಡೆ ಹೇಳಿದ್ದಾರೆ.</p>.<p>ಖಾಸಗಿ ಟಿವಿ ವಾಹಿನಿಯೊಂದರ ವರದಿಯಲ್ಲಿಚಿತ್ರಕೂಟ ಜಿಲ್ಲೆಯ ಗಣಿಗಾರಿಕೆ ಸ್ಥಳವೊಂದರಲ್ಲಿ ಕಲ್ಲು ಪುಡಿ ಮಾಡುವ ಕೆಲಸದಲ್ಲಿ ತೊಡಗಿರುವ ಅಪ್ರಾಪ್ತ ಬಾಲಕಿಯರು ತಮ್ಮ ಮೇಲಾಗುತ್ತಿರುವ ಲೈಂಗಿಕ ಶೋಷಣೆ ಕುರಿತು ಹೇಳಿಕೊಂಡಿದ್ದರು. ಇದು ಪ್ರಸಾರವಾದ ಬೆನ್ನಲ್ಲೇ ತನಿಖೆಗೆ ಆದೇಶ ನೀಡಿದ್ದಾರೆ.</p>.<p>‘ಗಣಿಗಾರಿಕೆ ಮಾಫಿಯಾದಲ್ಲಿ ತೊಡಗಿರುವವರಿಗೆ ತಮ್ಮನ್ನು ಅರ್ಪಿಸಿಕೊಳ್ಳದಿದ್ದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಬೆದರಿಕೆಯನ್ನು ನಮಗೆ ಒಡ್ಡಲಾಗಿದೆ’ ಎಂದೂ ಬಾಲಕಿಯರು ಆರೋಪಿಸಿದ್ದಾರೆ.</p>.<p>ಮಧ್ಯಪ್ರದೇಶದ ಗಡಿಭಾಗದಲ್ಲಿರುವ ಚಿತ್ರಕೂಟ ಜಿಲ್ಲೆಯು ಬುಂದೇಲ್ ಖಂಡ್ ಪ್ರಾಂತ್ಯದಲ್ಲಿದ್ದು, ಇದು ಅಕ್ರಮ ಗಣಿಗಾರಿಕೆಗೆ ಕುಖ್ಯಾತವಾಗಿದೆ. ಇಲ್ಲಿ ಕೆಲಸ ಮಾಡುವ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಪೂರ್ಣವೇತನ ಪಾವತಿಯಾಗುವುದಿಲ್ಲ ಎನ್ನುವ ಆರೋಪವೂ ಇದೆ.</p>.<p>‘ಬಾಲಕಿಯರ ಕುಟುಂಬದವರು ಇದುವರೆಗೆ ಯಾವುದೇ ದೂರು ನೀಡದ ಕಾರಣ, ಸ್ಥಳೀಯ ಪೊಲೀಸರಿಗೆ ಲೈಂಗಿಕ ಶೋಷಣೆಯ ಬಗ್ಗೆ ಹೆಚ್ಚಿನ ಅರಿವಿಲ್ಲ’ ಎಂದೂ ಜಿಲ್ಲಾಧಿಕಾರಿ ಹೇಳಿದ್ದಾರೆ.</p>.<p>‘ಹಿರಿಯ ಅಧಿಕಾರಿಯನ್ನೊಳಗೊಂಡ ತಂಡವು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಬಗ್ಗೆ ನಾವು ತನಿಖೆ ಕೈಗೊಂಡಿದ್ದೇವೆ’ ಎಂದು ಚಿತ್ರಕೂಟದ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯಲ್ಲಿ ಗಣಿಯಲ್ಲಿ ಕೆಲಸ ಮಾಡುವ ಬಡ, ಅಪ್ರಾಪ್ತ ಬಾಲಕಿಯರ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಶೋಷಣೆಯ ಕುರಿತು ತನಿಖೆ ನಡೆಸಬೇಕೆಂದು ಬುಧವಾರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶೇಷ್ಮಣಿ ಪಾಂಡೆ ಹೇಳಿದ್ದಾರೆ.</p>.<p>ಖಾಸಗಿ ಟಿವಿ ವಾಹಿನಿಯೊಂದರ ವರದಿಯಲ್ಲಿಚಿತ್ರಕೂಟ ಜಿಲ್ಲೆಯ ಗಣಿಗಾರಿಕೆ ಸ್ಥಳವೊಂದರಲ್ಲಿ ಕಲ್ಲು ಪುಡಿ ಮಾಡುವ ಕೆಲಸದಲ್ಲಿ ತೊಡಗಿರುವ ಅಪ್ರಾಪ್ತ ಬಾಲಕಿಯರು ತಮ್ಮ ಮೇಲಾಗುತ್ತಿರುವ ಲೈಂಗಿಕ ಶೋಷಣೆ ಕುರಿತು ಹೇಳಿಕೊಂಡಿದ್ದರು. ಇದು ಪ್ರಸಾರವಾದ ಬೆನ್ನಲ್ಲೇ ತನಿಖೆಗೆ ಆದೇಶ ನೀಡಿದ್ದಾರೆ.</p>.<p>‘ಗಣಿಗಾರಿಕೆ ಮಾಫಿಯಾದಲ್ಲಿ ತೊಡಗಿರುವವರಿಗೆ ತಮ್ಮನ್ನು ಅರ್ಪಿಸಿಕೊಳ್ಳದಿದ್ದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಬೆದರಿಕೆಯನ್ನು ನಮಗೆ ಒಡ್ಡಲಾಗಿದೆ’ ಎಂದೂ ಬಾಲಕಿಯರು ಆರೋಪಿಸಿದ್ದಾರೆ.</p>.<p>ಮಧ್ಯಪ್ರದೇಶದ ಗಡಿಭಾಗದಲ್ಲಿರುವ ಚಿತ್ರಕೂಟ ಜಿಲ್ಲೆಯು ಬುಂದೇಲ್ ಖಂಡ್ ಪ್ರಾಂತ್ಯದಲ್ಲಿದ್ದು, ಇದು ಅಕ್ರಮ ಗಣಿಗಾರಿಕೆಗೆ ಕುಖ್ಯಾತವಾಗಿದೆ. ಇಲ್ಲಿ ಕೆಲಸ ಮಾಡುವ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಪೂರ್ಣವೇತನ ಪಾವತಿಯಾಗುವುದಿಲ್ಲ ಎನ್ನುವ ಆರೋಪವೂ ಇದೆ.</p>.<p>‘ಬಾಲಕಿಯರ ಕುಟುಂಬದವರು ಇದುವರೆಗೆ ಯಾವುದೇ ದೂರು ನೀಡದ ಕಾರಣ, ಸ್ಥಳೀಯ ಪೊಲೀಸರಿಗೆ ಲೈಂಗಿಕ ಶೋಷಣೆಯ ಬಗ್ಗೆ ಹೆಚ್ಚಿನ ಅರಿವಿಲ್ಲ’ ಎಂದೂ ಜಿಲ್ಲಾಧಿಕಾರಿ ಹೇಳಿದ್ದಾರೆ.</p>.<p>‘ಹಿರಿಯ ಅಧಿಕಾರಿಯನ್ನೊಳಗೊಂಡ ತಂಡವು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ಬಗ್ಗೆ ನಾವು ತನಿಖೆ ಕೈಗೊಂಡಿದ್ದೇವೆ’ ಎಂದು ಚಿತ್ರಕೂಟದ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>