<p><strong>ನವದೆಹಲಿ: </strong>ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೇರಲಾಗಿರುವ ಲಾಕ್ಡೌನ್ನಿಂದಲೂ ಕೇಂದ್ರ ಸರ್ಕಾರ ಲಾಭ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಕೊರೊನಾ ವೈರಸ್ ಸೋಂಕು ಸಾಂಕ್ರಾಮಿಕಗೊಳ್ಳುತ್ತಿರುವ ಸಮಯದಲ್ಲಿ ವಲಸೆ ಕಾರ್ಮಿಕರನ್ನು ಸಾಗಿಸಲು ‘ಶ್ರಮಿಕ್ ರೈಲು‘ಗಳನ್ನು ಓಡಿಸುವ ಮೂಲಕ ಭಾರತೀಯ ರೈಲ್ವೆ ಲಾಭ ಗಳಿಸುತ್ತಿದೆ ಎಂಬ ವರದಿಯನ್ನು ಹಂಚಿಕೊಂಡಿರುವ ಅವರು ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.</p>.<p>‘ರೋಗದ ಕಾರ್ಮೋಡ ಕವಿದಿರುವ ಈ ಹೊತ್ತಿನಲ್ಲಿ ಜನರು ತೊಂದರೆಯಲ್ಲಿದ್ದಾರೆ. ಆದರೆ ಇದರಲ್ಲಿಯೂ ಲಾಭ ಗಳಿಸಲು ಪ್ರಯತ್ನಿಸಲಾಗುತ್ತಿದೆ. ಈ ಜನ ವಿರೋಧಿ ಸರ್ಕಾರವು ವಿಪತ್ತನ್ನು ಲಾಭದಾಯಕವಾಗಿ ಪರಿವರ್ತಿಸಿಕೊಂಡಿದೆ ಮತ್ತು ಗಳಿಕೆಯಲ್ಲಿ ತೊಡಗಿದೆ,’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಲಾಕ್ ಡೌನ್ ಸಮಯದಲ್ಲಿ ವಲಸೆಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ‘ಶ್ರಮಿಕ್’ ಹೆಸರಿನಲ್ಲಿ ರೈಲುಗಳನ್ನು ಓಡಿಸಲಾಗಿತ್ತು. ಇದರಿಂದ ರೈಲ್ವೆ ಇಲಾಖೆ ₹428 ಕೋಟಿ ಲಾಭ ಗಳಿಸಿದೆ ಎಂದು ರಾಹುಲ್ ಹಂಚಿಕೊಂಡಿದ್ದ ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೇರಲಾಗಿರುವ ಲಾಕ್ಡೌನ್ನಿಂದಲೂ ಕೇಂದ್ರ ಸರ್ಕಾರ ಲಾಭ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಕೊರೊನಾ ವೈರಸ್ ಸೋಂಕು ಸಾಂಕ್ರಾಮಿಕಗೊಳ್ಳುತ್ತಿರುವ ಸಮಯದಲ್ಲಿ ವಲಸೆ ಕಾರ್ಮಿಕರನ್ನು ಸಾಗಿಸಲು ‘ಶ್ರಮಿಕ್ ರೈಲು‘ಗಳನ್ನು ಓಡಿಸುವ ಮೂಲಕ ಭಾರತೀಯ ರೈಲ್ವೆ ಲಾಭ ಗಳಿಸುತ್ತಿದೆ ಎಂಬ ವರದಿಯನ್ನು ಹಂಚಿಕೊಂಡಿರುವ ಅವರು ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.</p>.<p>‘ರೋಗದ ಕಾರ್ಮೋಡ ಕವಿದಿರುವ ಈ ಹೊತ್ತಿನಲ್ಲಿ ಜನರು ತೊಂದರೆಯಲ್ಲಿದ್ದಾರೆ. ಆದರೆ ಇದರಲ್ಲಿಯೂ ಲಾಭ ಗಳಿಸಲು ಪ್ರಯತ್ನಿಸಲಾಗುತ್ತಿದೆ. ಈ ಜನ ವಿರೋಧಿ ಸರ್ಕಾರವು ವಿಪತ್ತನ್ನು ಲಾಭದಾಯಕವಾಗಿ ಪರಿವರ್ತಿಸಿಕೊಂಡಿದೆ ಮತ್ತು ಗಳಿಕೆಯಲ್ಲಿ ತೊಡಗಿದೆ,’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಲಾಕ್ ಡೌನ್ ಸಮಯದಲ್ಲಿ ವಲಸೆಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ‘ಶ್ರಮಿಕ್’ ಹೆಸರಿನಲ್ಲಿ ರೈಲುಗಳನ್ನು ಓಡಿಸಲಾಗಿತ್ತು. ಇದರಿಂದ ರೈಲ್ವೆ ಇಲಾಖೆ ₹428 ಕೋಟಿ ಲಾಭ ಗಳಿಸಿದೆ ಎಂದು ರಾಹುಲ್ ಹಂಚಿಕೊಂಡಿದ್ದ ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>