ನವದೆಹಲಿ: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಹೇರಲಾಗಿರುವ ಲಾಕ್ಡೌನ್ನಿಂದಲೂ ಕೇಂದ್ರ ಸರ್ಕಾರ ಲಾಭ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕೊರೊನಾ ವೈರಸ್ ಸೋಂಕು ಸಾಂಕ್ರಾಮಿಕಗೊಳ್ಳುತ್ತಿರುವ ಸಮಯದಲ್ಲಿ ವಲಸೆ ಕಾರ್ಮಿಕರನ್ನು ಸಾಗಿಸಲು ‘ಶ್ರಮಿಕ್ ರೈಲು‘ಗಳನ್ನು ಓಡಿಸುವ ಮೂಲಕ ಭಾರತೀಯ ರೈಲ್ವೆ ಲಾಭ ಗಳಿಸುತ್ತಿದೆ ಎಂಬ ವರದಿಯನ್ನು ಹಂಚಿಕೊಂಡಿರುವ ಅವರು ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.
बीमारी के ‘बादल’ छाए हैं, लोग मुसीबत में हैं, बेनिफ़िट ले सकते हैं - आपदा को मुनाफ़े में बदल कर कमा रही है ग़रीब विरोधी सरकार। pic.twitter.com/YSUsxIpSvC
‘ರೋಗದ ಕಾರ್ಮೋಡ ಕವಿದಿರುವ ಈ ಹೊತ್ತಿನಲ್ಲಿ ಜನರು ತೊಂದರೆಯಲ್ಲಿದ್ದಾರೆ. ಆದರೆ ಇದರಲ್ಲಿಯೂ ಲಾಭ ಗಳಿಸಲು ಪ್ರಯತ್ನಿಸಲಾಗುತ್ತಿದೆ. ಈ ಜನ ವಿರೋಧಿ ಸರ್ಕಾರವು ವಿಪತ್ತನ್ನು ಲಾಭದಾಯಕವಾಗಿ ಪರಿವರ್ತಿಸಿಕೊಂಡಿದೆ ಮತ್ತು ಗಳಿಕೆಯಲ್ಲಿ ತೊಡಗಿದೆ,’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಲಾಕ್ ಡೌನ್ ಸಮಯದಲ್ಲಿ ವಲಸೆಕಾರ್ಮಿಕರನ್ನು ಅವರ ಊರುಗಳಿಗೆ ತಲುಪಿಸಲು ‘ಶ್ರಮಿಕ್’ ಹೆಸರಿನಲ್ಲಿ ರೈಲುಗಳನ್ನು ಓಡಿಸಲಾಗಿತ್ತು. ಇದರಿಂದ ರೈಲ್ವೆ ಇಲಾಖೆ ₹428 ಕೋಟಿ ಲಾಭ ಗಳಿಸಿದೆ ಎಂದು ರಾಹುಲ್ ಹಂಚಿಕೊಂಡಿದ್ದ ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು.