ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಧಾನಸಭೆ ಅಧ್ಯಕ್ಷ ಸಿ.ಪಿ.ಜೋಶಿ ಅವರು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ ಎರಡು ದಿನದ ಬಳಿಕ ಮಹೇಶ್ ಜೋಶಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ವರುಣ್ ಚೋಪ್ರಾ ಅವರ ಮುಖಾಂತರ ಅರ್ಜಿ ಸಲ್ಲಿಸಿರುವ ಜೋಶಿ, ‘ಈ ಆದೇಶ ಅಸಾಂವಿಧಾನಿಕ ಹಾಗೂ ಅಕ್ರಮವಾಗಿದ್ದು, 1992ರಲ್ಲಿ ಕಿಹೊಟೊ ಹೊಲೊಹನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶಕ್ಕೆ ವಿರುದ್ಧವಾಗಿದೆ’ ಎಂದು ಉಲ್ಲೇಖಿಸಿದ್ದಾರೆ. 1992ರ ಆದೇಶದ ಅನ್ವಯ ‘ಅನರ್ಹತೆ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ವಿಧಾನಸಭೆ ಅಧ್ಯಕ್ಷರಿಗಿದ್ದು, ಈ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಮಧ್ಯಪ್ರವೇಶಿಸುವುದಕ್ಕೆ ಅನುಮತಿ ಇಲ್ಲ’ ಎಂದು ತಿಳಿಸಲಾಗಿದೆ.