<p><strong>ಜೈಪುರ:</strong> ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಬೆಂಬಲಿಗ ಕಾಂಗ್ರೆಸ್ ಶಾಸಕರು ಸೋಮವಾರದಿಂದ ಇಲ್ಲಿನ ರೆಸಾರ್ಟ್ ಒಂದಕ್ಕೆ ಸ್ಥಳಾಂತರಗೊಂಡಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಎರಡನೇ ಸಭೆಯು ಅಲ್ಲಿ ಆರಂಭವಾಗಿದೆ.</p>.<p>ಆದರೆ, ಮುಖ್ಯಮಂತ್ರಿಯ ವಿರುದ್ಧ ಬಂಡಾಯ ಎದ್ದಿರುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಎರಡನೆಯ ದಿನದ ಸಭೆಗೂ ಹಾಜರಾಗಿಲ್ಲ. ಅಷ್ಟೇ ಅಲ್ಲ ಅವರ ಜತೆಗೆ ಗುರುತಿಸಿಕೊಂಡಿರುವ ಶಾಸಕರು ಸಹ ಸಭೆಯಲ್ಲಿ ಪಾಲ್ಗೊಂಡಿಲ್ಲ.</p>.<p>ಕಾಂಗ್ರೆಸ್ನಲ್ಲಿ ಬಂಡಾಯದ ಲಕ್ಷಣಗಳು ಕಾಣಿಸಿಕೊಂಡ ನಂತರ ಶಾಸಕಾಂಗ ಪಕ್ಷದ ಮೊದಲ ಸಭೆಯು ಮುಖ್ಯಮಂತ್ರಿಯ ನಿವಾಸದಲ್ಲಿ ಸೋಮವಾರ ನಡೆದಿತ್ತು. ಆ ಸಭೆಗೆ 18 ಕಾಂಗ್ರೆಸ್ ಶಾಸಕರು ಗೈರಾಗಿದ್ದರು. ಆದರೆ ಪಕ್ಷೇತರ ಹಾಗೂ ಬೇರೆ ಪಕ್ಷಗಳ ಕೆಲವು ಶಾಸಕರು ಹಾಜರಾಗಿ, ಗೆಹ್ಲೊಟ್ ಅವರಿಗೆ ಬೆಂಬಲ ಸೂಚಿಸಿದ್ದರು.</p>.<p>ರೆಸಾರ್ಟ್ನಲ್ಲಿ ಆಯೋಜಿಸಿರುವ ಸಭೆಗೆ ಹಾಜರಾಗುವಂತೆ ಪಕ್ಷದ ರಾಜ್ಯ ಘಟಕದ ಉಸ್ತುವಾರಿ ಅವಿನಾಶ್ ಪಾಂಡೆ ಅವರು ಟ್ವೀಟ್ ಮೂಲಕ ಸಚಿನ್ ಹಾಗೂ ಅವರ ಬೆಂಬಲಿಗ ಶಾಸಕರಿಗೆ ಮಂಗಳವಾರ ಬೆಳಿಗ್ಗೆ ಮನವಿ ಮಾಡಿದ್ದರು.</p>.<p>‘ಸಚಿನ್ ಹಾಗೂ ಅವರ ಬೆಂಬಲಿಗರಿಗೆ ಎರಡನೇ ಅವಕಾಶವನ್ನು ನೀಡುತ್ತಿದ್ದೇವೆ. ಜನರು ಆಯ್ಕೆಮಾಡಿರುವ ಮತ್ತು ರಾಜ್ಯದ ಅಭಿವೃದ್ಧಿಯನ್ನು ಬಯಸುವ ನಾಯಕತ್ವಕ್ಕೆ ಅವರು ಬೆಂಬಲ ಸೂಚಿಸಬೇಕು ಎಂದು ನಾವು ನಿರೀಕ್ಷಿಸುತ್ತೇವೆ’ ಎಂದು ಅವರು ಮಾಧ್ಯಮದವರ ಜತೆ ಮಾತನಾಡುತ್ತಾ ತಿಳಿಸಿದರು.</p>.<p>ಸೋಮವಾರ ನಡೆದ ಸಭೆಯಲ್ಲಿ 106 ಶಾಸಕರು ಪಾಲ್ಗೊಂಡಿದ್ದರು ಎಂದು ನಾಯಕರು ವಾದಿಸಿದ್ದರು. ಆದರೆ ಇದನ್ನು ಸಚಿನ್ ಪೈಲೆಟ್ ನಿರಾಕರಿಸಿದ್ದರು. ಬದಲಿಗೆ, 30 ಶಾಸಕರು ನಮ್ಮ ಜತೆಗಿದ್ದಾರೆ ಎಂದು ಅವರು ವಾದಿಸಿದ್ದಾರೆ.</p>.<p>ಪಕ್ಷದ ಹಿರಿಯ ಮುಖಂಡರಾದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಅವರು ಸಚಿನ್ ಜತೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಬೆಂಬಲಿಗ ಕಾಂಗ್ರೆಸ್ ಶಾಸಕರು ಸೋಮವಾರದಿಂದ ಇಲ್ಲಿನ ರೆಸಾರ್ಟ್ ಒಂದಕ್ಕೆ ಸ್ಥಳಾಂತರಗೊಂಡಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಎರಡನೇ ಸಭೆಯು ಅಲ್ಲಿ ಆರಂಭವಾಗಿದೆ.</p>.<p>ಆದರೆ, ಮುಖ್ಯಮಂತ್ರಿಯ ವಿರುದ್ಧ ಬಂಡಾಯ ಎದ್ದಿರುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ, ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಎರಡನೆಯ ದಿನದ ಸಭೆಗೂ ಹಾಜರಾಗಿಲ್ಲ. ಅಷ್ಟೇ ಅಲ್ಲ ಅವರ ಜತೆಗೆ ಗುರುತಿಸಿಕೊಂಡಿರುವ ಶಾಸಕರು ಸಹ ಸಭೆಯಲ್ಲಿ ಪಾಲ್ಗೊಂಡಿಲ್ಲ.</p>.<p>ಕಾಂಗ್ರೆಸ್ನಲ್ಲಿ ಬಂಡಾಯದ ಲಕ್ಷಣಗಳು ಕಾಣಿಸಿಕೊಂಡ ನಂತರ ಶಾಸಕಾಂಗ ಪಕ್ಷದ ಮೊದಲ ಸಭೆಯು ಮುಖ್ಯಮಂತ್ರಿಯ ನಿವಾಸದಲ್ಲಿ ಸೋಮವಾರ ನಡೆದಿತ್ತು. ಆ ಸಭೆಗೆ 18 ಕಾಂಗ್ರೆಸ್ ಶಾಸಕರು ಗೈರಾಗಿದ್ದರು. ಆದರೆ ಪಕ್ಷೇತರ ಹಾಗೂ ಬೇರೆ ಪಕ್ಷಗಳ ಕೆಲವು ಶಾಸಕರು ಹಾಜರಾಗಿ, ಗೆಹ್ಲೊಟ್ ಅವರಿಗೆ ಬೆಂಬಲ ಸೂಚಿಸಿದ್ದರು.</p>.<p>ರೆಸಾರ್ಟ್ನಲ್ಲಿ ಆಯೋಜಿಸಿರುವ ಸಭೆಗೆ ಹಾಜರಾಗುವಂತೆ ಪಕ್ಷದ ರಾಜ್ಯ ಘಟಕದ ಉಸ್ತುವಾರಿ ಅವಿನಾಶ್ ಪಾಂಡೆ ಅವರು ಟ್ವೀಟ್ ಮೂಲಕ ಸಚಿನ್ ಹಾಗೂ ಅವರ ಬೆಂಬಲಿಗ ಶಾಸಕರಿಗೆ ಮಂಗಳವಾರ ಬೆಳಿಗ್ಗೆ ಮನವಿ ಮಾಡಿದ್ದರು.</p>.<p>‘ಸಚಿನ್ ಹಾಗೂ ಅವರ ಬೆಂಬಲಿಗರಿಗೆ ಎರಡನೇ ಅವಕಾಶವನ್ನು ನೀಡುತ್ತಿದ್ದೇವೆ. ಜನರು ಆಯ್ಕೆಮಾಡಿರುವ ಮತ್ತು ರಾಜ್ಯದ ಅಭಿವೃದ್ಧಿಯನ್ನು ಬಯಸುವ ನಾಯಕತ್ವಕ್ಕೆ ಅವರು ಬೆಂಬಲ ಸೂಚಿಸಬೇಕು ಎಂದು ನಾವು ನಿರೀಕ್ಷಿಸುತ್ತೇವೆ’ ಎಂದು ಅವರು ಮಾಧ್ಯಮದವರ ಜತೆ ಮಾತನಾಡುತ್ತಾ ತಿಳಿಸಿದರು.</p>.<p>ಸೋಮವಾರ ನಡೆದ ಸಭೆಯಲ್ಲಿ 106 ಶಾಸಕರು ಪಾಲ್ಗೊಂಡಿದ್ದರು ಎಂದು ನಾಯಕರು ವಾದಿಸಿದ್ದರು. ಆದರೆ ಇದನ್ನು ಸಚಿನ್ ಪೈಲೆಟ್ ನಿರಾಕರಿಸಿದ್ದರು. ಬದಲಿಗೆ, 30 ಶಾಸಕರು ನಮ್ಮ ಜತೆಗಿದ್ದಾರೆ ಎಂದು ಅವರು ವಾದಿಸಿದ್ದಾರೆ.</p>.<p>ಪಕ್ಷದ ಹಿರಿಯ ಮುಖಂಡರಾದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಅವರು ಸಚಿನ್ ಜತೆ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>