ರಾಜ್ಯಪಾಲರು ಕೇಂದ್ರ ಸರ್ಕಾರದ ಅಡಿಯಾಳಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಕಾಂಗ್ರೆಸ್ ಶಾಸಕರ ಟೀಕೆಗೆ ಪ್ರತಿಕ್ರಿಯಿಸಿರುವ ಅವರು, ‘ನಾನು ಯಾವತ್ತೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವುದಿಲ್ಲ. ಸರ್ಕಾರವೂ ಸಂವಿಧಾನ ಬದ್ಧವಾಗಿಯೇ ಕೆಲಸ ಮಾಡಬೇಕೆಂದು ಬಯಸುತ್ತೇನೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಅನೇಕ ನಿರ್ದೇಶನಗಳನ್ನು ನೀಡುತ್ತಾ ಬಂದಿದ್ದೇನೆ. ಅಧಿವೇಶನಕ್ಕೆ ಅನುಮತಿ ಕೋರಿ 21 ದಿನಗಳ ಮುಂಚೆಯೇ ನೋಟಿಸ್ ನೀಡಬೇಕು. ಆ ನಿಯಮವನ್ನೂ ಪಾಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದೆ’ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.