ಶನಿವಾರ ಮತ್ತೆ ಸಂಪುಟ ಸಭೆ ಸೇರಲಿದ್ದು, ಬೆಳವಣಿಗೆಗಳನ್ನು ಚರ್ಚಿಸಲಿದೆ ಎಂದು ಮೂಲಗಳು ತಿಳಿಸಿವೆ. ವಿಶ್ವಾಸಮತ ಸಾಬೀತುಪಡಿಸಲು ಅನುವಾಗುವಂತೆ ಅಧಿವೇಶನ ಕರೆಯಬೇಕು ಎಂದು ಕಾಂಗ್ರೆಸ್ ಪಟ್ಟುಹಿಡಿದಿದೆ. ಸ್ಪೀಕರ್ ಅವರು ಪೈಲಟ್ ಮತ್ತು 18 ಶಾಸಕರಿಗೆ ನೀಡಿದ್ದ ಅನರ್ಹತೆ ನೋಟಿಸ್ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ.