<p><strong>ಜೈಪುರ:</strong> ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಬೆಂಬಲಿಗರಾದ ವಿಶ್ವೇಂದ್ರ ಸಿಂಗ್, ಭನ್ವರ್ಲಾಲ್ ಶರ್ಮಾರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.</p>.<p>ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಸಂಚು ಹೂಡಿದ್ದ ಆಡಿಯೊ ಸಾಕ್ಷ್ಯ ಬಿಡುಗಡೆ ಕುರಿತು ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ಪ್ರಜಾಪ್ರಭುತ್ವದಲ್ಲಿ ಕರಾಳ ಇತಿಹಾಸವಿದು ಎಂದು ಹೇಳಿದ್ದಾರೆ.</p>.<p>ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಬಿಜೆಪಿ ನಾಯಕ ಸಂಜಯ್ ಜೈನ್ ಮತ್ತು ಕಾಂಗ್ರೆಸ್ ಶಾಸಕ ಭನ್ವರ್ ಲಾಲ್ ಶರ್ಮಾ ಅವರ ನಡುವೆ ನಡೆದ ಸಂಭಾಷಣೆಯ, ಶಾಸಕರಿಗೆ ಆಮಿಷವೊಡ್ಡುವುದಕ್ಕೆ ಸಂಬಂಧಿಸಿದ ಆಡಿಯೊಗಳು ಬಿಜೆಪಿಯ ಸಂಚು ಬಯಲು ಮಾಡಿವೆ ಎಂದೂ ಅವರು ಹೇಳಿದ್ದಾರೆ. ಶಾಸಕರನ್ನು ಹಣ ನೀಡಿ ಖರೀದಿಸಿ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಜಸ್ಥಾನ ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡಿದ ವಿಚಾರವಾಗಿ ವಿಶೇಷ ಕಾರ್ಯಾಚರಣೆ ತಂಡಕ್ಕೆ (ಎಸ್ಒಜಿ) ದೂರು ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ ಎಂದು ಕಾಂಗ್ರೆಸ್ನ ಮುಖ್ಯ ವಿಪ್ ಮಹೇಶ್ ಜೋಶಿ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/rajasthan-politics-ashok-gehlot-camp-releases-audio-proof-against-sachin-pilot-745723.html" itemprop="url">ಸಚಿನ್ ಪೈಲಟ್ ಸಂಚಿನ ಕುರಿತು ಅಶೋಕ್ ಗೆಹ್ಲೋಟ್ ಬಣದಿಂದ ಆಡಿಯೊ ಸಾಕ್ಷ್ಯ ಬಿಡುಗಡೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಬೆಂಬಲಿಗರಾದ ವಿಶ್ವೇಂದ್ರ ಸಿಂಗ್, ಭನ್ವರ್ಲಾಲ್ ಶರ್ಮಾರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.</p>.<p>ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಸಂಚು ಹೂಡಿದ್ದ ಆಡಿಯೊ ಸಾಕ್ಷ್ಯ ಬಿಡುಗಡೆ ಕುರಿತು ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ಪ್ರಜಾಪ್ರಭುತ್ವದಲ್ಲಿ ಕರಾಳ ಇತಿಹಾಸವಿದು ಎಂದು ಹೇಳಿದ್ದಾರೆ.</p>.<p>ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಬಿಜೆಪಿ ನಾಯಕ ಸಂಜಯ್ ಜೈನ್ ಮತ್ತು ಕಾಂಗ್ರೆಸ್ ಶಾಸಕ ಭನ್ವರ್ ಲಾಲ್ ಶರ್ಮಾ ಅವರ ನಡುವೆ ನಡೆದ ಸಂಭಾಷಣೆಯ, ಶಾಸಕರಿಗೆ ಆಮಿಷವೊಡ್ಡುವುದಕ್ಕೆ ಸಂಬಂಧಿಸಿದ ಆಡಿಯೊಗಳು ಬಿಜೆಪಿಯ ಸಂಚು ಬಯಲು ಮಾಡಿವೆ ಎಂದೂ ಅವರು ಹೇಳಿದ್ದಾರೆ. ಶಾಸಕರನ್ನು ಹಣ ನೀಡಿ ಖರೀದಿಸಿ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ರಾಜಸ್ಥಾನ ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡಿದ ವಿಚಾರವಾಗಿ ವಿಶೇಷ ಕಾರ್ಯಾಚರಣೆ ತಂಡಕ್ಕೆ (ಎಸ್ಒಜಿ) ದೂರು ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ ಎಂದು ಕಾಂಗ್ರೆಸ್ನ ಮುಖ್ಯ ವಿಪ್ ಮಹೇಶ್ ಜೋಶಿ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/rajasthan-politics-ashok-gehlot-camp-releases-audio-proof-against-sachin-pilot-745723.html" itemprop="url">ಸಚಿನ್ ಪೈಲಟ್ ಸಂಚಿನ ಕುರಿತು ಅಶೋಕ್ ಗೆಹ್ಲೋಟ್ ಬಣದಿಂದ ಆಡಿಯೊ ಸಾಕ್ಷ್ಯ ಬಿಡುಗಡೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>