ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ನ ಎರಡೂ ಶಾಸಕಾಂಗ ಪಕ್ಷದ ಸಭೆಗೆ ಪೈಲಟ್ ಹಾಜರಾಗಿರಲಿಲ್ಲ. ಹೀಗಾಗಿ ಅವರನ್ನು ಮಂಗಳವಾರ ವಜಾಗೊಳಿಸಲಾಗಿತ್ತು. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮುಖಂಡರಾದ ಪ್ರಿಯಾಂಕಾ ಗಾಂಧಿ ವಾದ್ರಾ, ಪಿ. ಚಿದಂಬರಂ, ಕೆ.ಸಿ. ವೇಣುಗೋಪಾಲ್ ಸೇರಿ ಹಲವರು ಪೈಲಟ್ ಅವರ ಬಂಡಾಯ ಶಮನಕ್ಕೆ ಯತ್ನಿಸಿದ್ದಾರೆ. ಆದರೆ, ಅದು ಫಲ ನೀಡಿಲ್ಲ ಎನ್ನಲಾಗಿದೆ.