<p><strong>ನವದೆಹಲಿ:</strong>ಕಾಂಗ್ರೆಸ್ನ ಬಂಡಾಯ ಶಾಸಕರ ವಿರುದ್ಧ ಶುಕ್ರವಾರದವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ನೀಡಿರುವ ‘ನಿರ್ದೇಶನ’ವನ್ನು ಪ್ರಶ್ನಿಸಿ ರಾಜಸ್ಥಾನ ವಿಧಾನಸಭಾ ಸ್ಪೀಕರ್ ಸಿ.ಪಿ.ಜೋಶಿ ಅವರು ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುವುದನ್ನು ತಪ್ಪಿಸಲು ಹೀಗೆ ಮಾಡಿದ್ದಾಗಿ ಅವರು ಹೇಳಿದ್ದಾರೆ.</p>.<p>ಸ್ಪೀಕರ್ ತಮಗೆ ನೀಡಿರುವ ನೋಟಿಸ್ ಅನ್ನು ಪ್ರಶ್ನಿಸಿ ಬಂಡಾಯ ಶಾಸಕ ಸಚಿನ್ ಪೈಲಟ್ ಅವರ ಬೆಂಬಲಿಗ ಶಾಸಕರು ಹೈಕೋರ್ಟ್ ಮೊರೆಹೋಗಿದ್ದರು. ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ಕೋರ್ಟ್, ಶುಕ್ರವಾರ ಈ ಕುರಿತ ಆದೇಶ ನೀಡುವುದಾಗಿ ಹೇಳಿದ್ದಲ್ಲದೆ, ಅಲ್ಲಿಯವರೆಗೆ ಈ ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸ್ಪೀಕರ್ಗೆ ನಿರ್ದೇಶನ ನೀಡಿತ್ತು.</p>.<p>‘ಶಾಸಕರ ಅನರ್ಹತೆಯು ವಿಧಾಸನಭಾ ಕಲಾಪದ ಭಾಗ. ಆದ್ದರಿಂದ ಈ ವಿಚಾರದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಬಾರದಾಗಿತ್ತು. ಸಂಸ್ಥೆಯೊಂದರ ವ್ಯಾಖ್ಯಾನಿತ ಅಧಿಕಾರವನ್ನು ಮೊಟಕುಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ’ ಎಂದು ಸ್ಪೀಕರ್ ವಾದಿಸಿದ್ದಾರೆ.</p>.<p>ಶಾಸಕರಿಗೆ ನೀಡಿದ್ದ ನೋಟಿಸ್ಗೆ ಪ್ರತಿಕ್ರಿಯೆ ನೀಡಲು ನಿಗದಿ ಮಾಡಿದ್ದ ಗಡುವನ್ನು ವಿಸ್ತರಿಸುವಂತೆ ಎರಡು ಬಾರಿ ಕೋರ್ಟ್ ಮಾಡಿದ್ದ ಮನವಿಯನ್ನು ಸ್ಪೀಕರ್ ಪರ ವಕೀಲರು ಒಪ್ಪಿಕೊಂಡಿದ್ದರು. ಮಂಗಳವಾರವೂ ವಿಚಾರಣೆ ಮುಗಿಯದ ಕಾರಣ ಇನ್ನೊಮ್ಮೆ ಗಡುವು ವಿಸ್ತರಿಸುವಂತೆ ಕೋರ್ಟ್ ಮನವಿ ಮಾಡಿತ್ತು. ಆದರೆ ಈ ಬಾರಿ ಕೋರ್ಟ್ ಲಿಖಿತವಾಗಿ ‘ನಿರ್ದೇಶನ’ ನೀಡಿರುವುದು ಸಮಸ್ಯೆಗೆ ಕಾರಣವಾಗಿದೆ.</p>.<p>ಕೋರ್ಟ್ ಮನವಿಯಂತೆ ಎರಡು ಬಾರಿ ಗಡುವನ್ನು ವಿಸ್ತರಿಸಲಾಗಿದೆ. ಅದರ ಹೊರತಾಗಿಯೂ ಈಗ ‘ನಿರ್ದೇಶನ’ ನೀಡುವ ಅಗತ್ಯವೇನಿತ್ತು? ‘ನಿರ್ದೇಶನ’ ಎಂಬ ಪದದ ಬಗ್ಗೆಯೇ ಸ್ಪೀಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.</p>.<p>ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವಂತೆ ಸೂಚಿಸಿ ನೀಡಲಾಗಿದ್ದ ವಿಪ್ ಅನ್ನು ಈ 19 ಶಾಸಕರು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ನೀಡಿರುವ ದೂರಿನ ಆಧಾರದಲ್ಲಿ ಶಾಸಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಸಂವಿಧಾನದ 10ನೇ ವಿಧಿಯ ಪ್ಯಾರ 2(1)(ಎ) ಅಡಿ ಈ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸ್ಪೀಕರ್ಗೆ ನೀಡಿದ್ದ ದೂರಿನಲ್ಲಿ ಒತ್ತಾಯಿಸಿತ್ತು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಕಾಂಗ್ರೆಸ್ನ ಬಂಡಾಯ ಶಾಸಕರ ವಿರುದ್ಧ ಶುಕ್ರವಾರದವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ನೀಡಿರುವ ‘ನಿರ್ದೇಶನ’ವನ್ನು ಪ್ರಶ್ನಿಸಿ ರಾಜಸ್ಥಾನ ವಿಧಾನಸಭಾ ಸ್ಪೀಕರ್ ಸಿ.ಪಿ.ಜೋಶಿ ಅವರು ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗುವುದನ್ನು ತಪ್ಪಿಸಲು ಹೀಗೆ ಮಾಡಿದ್ದಾಗಿ ಅವರು ಹೇಳಿದ್ದಾರೆ.</p>.<p>ಸ್ಪೀಕರ್ ತಮಗೆ ನೀಡಿರುವ ನೋಟಿಸ್ ಅನ್ನು ಪ್ರಶ್ನಿಸಿ ಬಂಡಾಯ ಶಾಸಕ ಸಚಿನ್ ಪೈಲಟ್ ಅವರ ಬೆಂಬಲಿಗ ಶಾಸಕರು ಹೈಕೋರ್ಟ್ ಮೊರೆಹೋಗಿದ್ದರು. ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ಕೋರ್ಟ್, ಶುಕ್ರವಾರ ಈ ಕುರಿತ ಆದೇಶ ನೀಡುವುದಾಗಿ ಹೇಳಿದ್ದಲ್ಲದೆ, ಅಲ್ಲಿಯವರೆಗೆ ಈ ಶಾಸಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಸ್ಪೀಕರ್ಗೆ ನಿರ್ದೇಶನ ನೀಡಿತ್ತು.</p>.<p>‘ಶಾಸಕರ ಅನರ್ಹತೆಯು ವಿಧಾಸನಭಾ ಕಲಾಪದ ಭಾಗ. ಆದ್ದರಿಂದ ಈ ವಿಚಾರದಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸಬಾರದಾಗಿತ್ತು. ಸಂಸ್ಥೆಯೊಂದರ ವ್ಯಾಖ್ಯಾನಿತ ಅಧಿಕಾರವನ್ನು ಮೊಟಕುಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ’ ಎಂದು ಸ್ಪೀಕರ್ ವಾದಿಸಿದ್ದಾರೆ.</p>.<p>ಶಾಸಕರಿಗೆ ನೀಡಿದ್ದ ನೋಟಿಸ್ಗೆ ಪ್ರತಿಕ್ರಿಯೆ ನೀಡಲು ನಿಗದಿ ಮಾಡಿದ್ದ ಗಡುವನ್ನು ವಿಸ್ತರಿಸುವಂತೆ ಎರಡು ಬಾರಿ ಕೋರ್ಟ್ ಮಾಡಿದ್ದ ಮನವಿಯನ್ನು ಸ್ಪೀಕರ್ ಪರ ವಕೀಲರು ಒಪ್ಪಿಕೊಂಡಿದ್ದರು. ಮಂಗಳವಾರವೂ ವಿಚಾರಣೆ ಮುಗಿಯದ ಕಾರಣ ಇನ್ನೊಮ್ಮೆ ಗಡುವು ವಿಸ್ತರಿಸುವಂತೆ ಕೋರ್ಟ್ ಮನವಿ ಮಾಡಿತ್ತು. ಆದರೆ ಈ ಬಾರಿ ಕೋರ್ಟ್ ಲಿಖಿತವಾಗಿ ‘ನಿರ್ದೇಶನ’ ನೀಡಿರುವುದು ಸಮಸ್ಯೆಗೆ ಕಾರಣವಾಗಿದೆ.</p>.<p>ಕೋರ್ಟ್ ಮನವಿಯಂತೆ ಎರಡು ಬಾರಿ ಗಡುವನ್ನು ವಿಸ್ತರಿಸಲಾಗಿದೆ. ಅದರ ಹೊರತಾಗಿಯೂ ಈಗ ‘ನಿರ್ದೇಶನ’ ನೀಡುವ ಅಗತ್ಯವೇನಿತ್ತು? ‘ನಿರ್ದೇಶನ’ ಎಂಬ ಪದದ ಬಗ್ಗೆಯೇ ಸ್ಪೀಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.</p>.<p>ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವಂತೆ ಸೂಚಿಸಿ ನೀಡಲಾಗಿದ್ದ ವಿಪ್ ಅನ್ನು ಈ 19 ಶಾಸಕರು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ನೀಡಿರುವ ದೂರಿನ ಆಧಾರದಲ್ಲಿ ಶಾಸಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಸಂವಿಧಾನದ 10ನೇ ವಿಧಿಯ ಪ್ಯಾರ 2(1)(ಎ) ಅಡಿ ಈ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸ್ಪೀಕರ್ಗೆ ನೀಡಿದ್ದ ದೂರಿನಲ್ಲಿ ಒತ್ತಾಯಿಸಿತ್ತು. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>