ನವದೆಹಲಿ: ಭಾರತದ ಭೂಪ್ರದೇಶದ ಒಂದು ಇಂಚನ್ನು ಕೂಡ ಮುಟ್ಟಲು ಸಾಧ್ಯವಿಲ್ಲ ಎಂಬ ಕೇಂದ್ರ ರಕ್ಷಣಾ ಸಚಿವ ಹೇಳಿಕೆಯು ಕೇವಲ 'ವಾಕ್ಚಾತುರ್ಯ'ವಷ್ಟೇ ಎಂದಿರುವ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಭದ್ರತಾ ಸಂಸ್ಥೆಗಳ ಲೆಕ್ಕಾಚಾರದ ಪ್ರಕಾರ ವಾಸ್ತವ ನಿಯಂತ್ರಣ ರೇಖೆಯ (ಎಲ್ಎಸಿ) ಭಾರತದ ಕಡೆಯಲ್ಲಿ ಚೀನಾದ ಸೈನ್ಯವು ಇನ್ನೂ ಇದೆ ಎಂದು ಕಿಡಿಕಾರಿದ್ದಾರೆ.