ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಅಮರ್‌ಸಿಂಗ್‌ ಅಂತ್ಯಕ್ರಿಯೆ

ಅಗಲಿದ ನಾಯಕನಿಗೆ ಗಣ್ಯರಿಂದ ಅಂತಿಮ ನಮನ
Last Updated 3 ಆಗಸ್ಟ್ 2020, 8:33 IST
ಅಕ್ಷರ ಗಾತ್ರ

ನವದೆಹಲಿ: ಇತ್ತೀಚೆಗೆ ನಿಧನರಾದ ಸಮಾಜವಾದಿ ಪಕ್ಷದ ನಾಯಕ, ರಾಜ್ಯಸಭಾ ಸದಸ್ಯ ಅಮರ್‌ ಸಿಂಗ್ ಅವರ ಅಂತ್ಯಕ್ರಿಯೆ ಇಲ್ಲಿನ ಛಾತರ್‌ಪುರ್‌ ಚಿತಾಗಾರದಲ್ಲಿ ಸೋಮವಾರ ಕುಟುಂಬದವರು, ಬಂಧುಬಾಂಧವರ ಸಮ್ಮುಖದಲ್ಲಿ ನೆರವೇರಿತು.

ಸಿಂಗ್ ಅವರ ಇಬ್ಬರು ಪುತ್ರಿಯರು ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನೆರವೇರಿಸಿದರು. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ, ಸರ್ಕಾರದ ನಿಯಮದ ಪ್ರಕಾರ ಅಂತ್ಯಕ್ರಿಯೆ ಸಂದರ್ಭದಲ್ಲಿ ನಟಿ, ರಾಜಕಾರಣಿ ಜಯಪ್ರದಾ ಸೇರಿದಂತೆ ಕಡಿಮೆ ಸಂಖ್ಯೆಯಲ್ಲಿ ಸಿಂಗ್‌ ಆಪ್ತವಲಯದವರು ಪಾಲ್ಗೊಂಡಿದ್ದರು.

ಭಾನುವಾರ ಸಂಜೆ, ಅಮರಸಿಂಗ್ ಅವರ ಪಾರ್ಥಿವ ಶರೀರವನ್ನು ಖಾಸಗಿ ವಿಮಾನದ ಮೂಲಕ ನವದೆಹಲಿಯಲ್ಲಿನ ಸಿಂಗ್‌ ಅವರ ಛಾತರ್‌ಪುರ್ ಫಾರ್ಮ್‌ಹೌಸ್‌ಗೆ ತರಲಾಗಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ, ರಾಜ್ಯಸಭಾ ಮಾಜಿ ಸದಸ್ಯ ಜಯಪ್ರದಾ ಮತ್ತಿತರರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT