ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 3ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ರಕ್ಷಾ ಬಂಧನಕ್ಕೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದಿದ್ದಾರೆ.
रक्षा बंधन के पावन पर्व पर समस्त देशवासियों को बहुत-बहुत शुभकामनाएं।
— Narendra Modi (@narendramodi) August 3, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಆಸ್ಪತ್ರೆ ಸೇರಿದ್ದಾರೆ. ಹೀಗಿದ್ದರೂ ರಕ್ಷಾ ಬಂಧನಕ್ಕೆ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ರಕ್ಷಾಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
समस्त देशवासियों को रक्षाबंधन के पावन पर्व की हार्दिक शुभकामनाएँ। pic.twitter.com/OLWQgfuUvi
— Amit Shah (@AmitShah) August 3, 2020
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಟ್ವೀಟ್ ಮೂಲಕ ಶುಭಾಶಯ ಕೋರಿದ್ದು, ರಕ್ಷಾ ಬಂಧನಕ್ಕೆ ಶುಭಾಶಯಗಳು! ರಾಖಿ ಎಂಬುದು ಪ್ರೀತಿ ಮತ್ತು ನಂಬಿಕೆಯ ಪವಿತ್ರ ದಾರವಾಗಿದ್ದು, ಸಹೋದರಿಯರನ್ನು ಸಹೋದರರೊಂದಿಗೆ ವಿಶೇಷ ಬಂಧವನ್ನು ಬೆಸೆಯುತ್ತದೆ. ಈ ದಿನ ಮಹಿಳೆಯರ ಗೌರವ ಮತ್ತು ಘನತೆಯನ್ನು ಭದ್ರಪಡಿಸುವ ನಾವು ಬದ್ಧತೆಯನ್ನು ಪುನರುಚ್ಚರಿಸೋಣ ಎಂದಿದ್ದಾರೆ.
Greetings on Raksha Bandhan! Rakhi is the sacred thread of love and trust that connects sisters with brothers in a special bond. On this day, let us reiterate our commitment to secure the honour and dignity of women.
— President of India (@rashtrapatibhvn) August 3, 2020
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಟ್ವೀಟ್ ಮಾಡಿ ಶುಭಾಶಯ ಕೋರಿದ್ದು, ಎಲ್ಲರಿಗೂ ರಾಖಿ ಬಂಧನದ ಶುಭಾಶಯಗಳು. ಲಾರ್ಡ್ ಕರ್ಜನ್ ಬಂಗಾಳವನ್ನು ವಿಭಜಿಸಲು ನಿರ್ಧರಿಸಿದ ನಂತರ, ಕಬಿಗುರು ರವೀಂದ್ರನಾಥ ಠಾಕೂರ್ ಏಕತೆ ಮತ್ತು ಸಾಮರಸ್ಯದ ಸಂದೇಶವನ್ನು ನೀಡಲು ರಾಖಿ ಬಂಧನ್ ಸಂಪ್ರದಾಯವನ್ನು ಪ್ರಾರಂಭಿಸಿದರು. ಅವರು ‘ಬಾಂಗ್ಲರ್ ಮತಿ, ಬಾಂಗ್ಲರ್ ಜೋಲ್’ ಎಂಬ ಪದ್ಯವನ್ನು ಕೂಡ ಬರೆದಿದ್ದಾರೆ. ಎಲ್ಲರಿಗೂ ನನ್ನ ಶುಭಾಶಯಗಳು ಎಂದು ಬರೆದಿದ್ದಾರೆ.
Wishing everyone Happy Rakhi Bandhan. After Lord Curzon decided to divide #Bengal, Kabiguru Rabindranath Thakur started the Rakhi Bandhan tradition to give a message of unity and harmony. He also penned ‘Banglar Mati, Banglar Jol’. My best wishes to all
— Mamata Banerjee (@MamataOfficial) August 3, 2020
ನಾಡಿನ ಎಲ್ಲ ಸಹೋದರ ಸಹೋದರಿಯರಿಗೆ ರಕ್ಷಾಬಂಧನದ ಹೃತ್ಪೂರ್ವಕ ಶುಭಾಶಯಗಳು. ಭ್ರಾತೃತ್ವದ ಸಂಬಂಧವನ್ನು ಸಂಭ್ರಮಿಸುವ, ಬಾಂಧವ್ಯವನ್ನು ಗಟ್ಟಿಗೊಳಿಸುವ ರಕ್ಷಾಬಂಧನ ಎಲ್ಲರ ಬಾಳಿನಲ್ಲಿ ಸಂತಸದ ಹೊಂಬೆಳಕನ್ನು ಮೂಡಿಸಲಿ ಎಂದು ಹಾರೈಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.
ನಾಡಿನ ಎಲ್ಲ ಸಹೋದರ ಸಹೋದರಿಯರಿಗೆ ರಕ್ಷಾಬಂಧನದ ಹೃತ್ಪೂರ್ವಕ ಶುಭಾಶಯಗಳು.
— CM of Karnataka (@CMofKarnataka) August 3, 2020
ಭ್ರಾತೃತ್ವದ ಸಂಬಂಧವನ್ನು ಸಂಭ್ರಮಿಸುವ, ಬಾಂಧವ್ಯವನ್ನು ಗಟ್ಟಿಗೊಳಿಸುವ ರಕ್ಷಾಬಂಧನ ಎಲ್ಲರ ಬಾಳಿನಲ್ಲಿ ಸಂತಸದ ಹೊಂಬೆಳಕನ್ನು ಮೂಡಿಸಲಿ ಎಂದು ಹಾರೈಸುತ್ತೇನೆ.#RakshaBandhan2020 pic.twitter.com/B21V8zAw4i
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.