ಭೋಪಾಲ್: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಎಲ್ಲರ ಒಪ್ಪಿಗೆ ಮೇರೆಗೇ ಆಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಕಮಲನಾಥ್ ಹೇಳಿದ್ದಾರೆ.
ಟ್ವಿಟರ್ನಲ್ಲಿ ಹಂಚಿಕೊಂಡಿರುವ ವಿಡಿಯೊದಲ್ಲಿ ಮಾತನಾಡಿರುವ ಅವರು, ‘ದೇಶದ ಲಕ್ಷಾಂತರ ಜನರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂದು ಬಯಸಿದ್ದರು. ಅವರೆಲ್ಲರ ಒಪ್ಪಿಗೆ ಮೇಲೆ ಮಂದಿರ ನಿರ್ಮಾಣವಾಗುತ್ತಿದೆ. ಇದನ್ನು ನಾನು ಸ್ವಾಗತಿಸುತ್ತೇನೆ‘ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮುಖಂಡ ದಿಗ್ವಿಜಯ ಸಿಂಗ್ ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಮಾಜಿಪ್ರಧಾನಿ ರಾಜೀವ್ಗಾಂಧಿ ಬಯಸಿದ್ದರು‘ ಎಂದು ಟ್ವೀಟ್ ಮಾಡಿದ್ದಾರೆ.
‘ನಾವು ಭಗವಾನ್ ರಾಮನನ್ನು ನಂಬುತ್ತೇವೆ. ರಾಮನ ಮೇಲಿನ ನಂಬಿಕೆಯಲ್ಲಿಯೇ ದೇಶ ನಡೆಯುತ್ತಿದೆ. ಅದಕ್ಕಾಗಿಯೇ ನಾವೆಲ್ಲ ಅಯೋಧ್ಯೆಯ ರಾಮನ ಜನ್ಮಸ್ಥಳದಲ್ಲಿ ಭವ್ಯವಾದ ದೇವಾಲಯ ನಿರ್ಮಾಣವಾಗಬೇಕೆಂದು ಬಯಸುತ್ತೇವೆ‘ ಎಂದು ಅವರು ಹೇಳಿದ್ದಾರೆ.
मै अयोध्या में राम मंदिर निर्माण का स्वागत करता हूँ। देशवासियों को इसकी बहुत दिनों से अपेक्षा और आकांक्षा थी। राम मंदिर का निर्माण हर भारतवासी की सहमति से हो रहा है, ये सिर्फ़ भारत में ही संभव है। —कमलनाथ pic.twitter.com/18RI3arOMs
रही बात मुहूर्त की, तो इस देश में 90 प्रतिशत से भी ज्यादा हिन्दू ऐसे होंगे जो मुहूर्त, ग्रह दशा, ज्योतिष, चौघड़िया आदि धार्मिक विज्ञान को मानते हैं। मैं तटस्थ हूँ इस बात पर कि 5 अगस्त को शिलान्यास का कोई मुहूर्त नही है ये सीधे-सीधे धार्मिक भावनाओं और मान्यताओं से खिलवाड़ है।