ಸುದ್ದಿಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ರಾಜಸ್ಥಾನದ ರಾಜಕೀಯ ಅಸ್ಥಿರತೆಯ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಆರೋಪಿಸಿದ ಸಿಂಗ್, ‘ಬೇರೆ ಪಕ್ಷದಿಂದ ಬಿಜೆಪಿಗೆ ಹೋಗಿರುವ ಯಾರೂ ಏಳಿಗೆ ಸಾಧಿಸಿಲ್ಲ. ಜ್ಯೋತಿರಾದಿತ್ಯ ಮಾಡಿರುವ ತಪ್ಪನ್ನೇ ನೀವೂ ಮಾಡಬೇಡಿ. ನಿಮಗಿನ್ನೂ ವಯಸ್ಸಿದೆ. ಅಶೋಕ್ ಗೆಹ್ಲೋಟ್ ಅವರಿಂದ ನಿಮಗೆ ಅನ್ಯಾಯ ಆಗಿರಬಹುದು. ಆದರೆ, ಆ ಸಮಸ್ಯೆಯನ್ನು ಮಾತುಕತೆಯ ಮೂಲಕ ಬಗೆಹರಿಸಬಹುದು’ ಎಂದು ಸಚಿನ್ ಅವರಿಗೆ ಸಲಹೆ ನೀಡಿದ್ದಾರೆ.