ರಾಮಜನ್ಮಭೂಮಿ ಟ್ರಸ್ಟ್ ಕಲಾಕೃತಿ ಮತ್ತು ದೊರೆತ ವಸ್ತುಗಳನ್ನು ರಕ್ಷಿಸುವುದಾಗಿ ಹೇಳಿದೆ. ಆದರೂ, ಅರ್ಜಿದಾರರು ಸಂವಿಧಾನದ 32ನೇ ವಿಧಿಯನ್ವಯ ಕೋರ್ಟ್ ಮುಂದೆ ಬಂದಿರುವುದು ಏಕೆ ಎಂದು ಪೀಠ ಪ್ರಶ್ನಿಸಿತು. ಅರ್ಜಿದಾರರಾದ ಸತೀಶ್ ಚಿಂದೂಜಿ ಶಂಭರ್ಕರ್ ಮತ್ತು ಡಾ.ಅಂಬೇಡ್ಕರ್ ಫೌಂಡೇಶನ್ಗೆ ದಂಡ ವಿಧಿಸಬೇಕು ಎಂದು ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದನ್ನು ಪೀಠ ಪುರಸ್ಕರಿಸಿತು.