<p><strong>ನವದೆಹಲಿ: </strong>ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿ ನೀಡುವಲ್ಲಿ ಮೀಸಲಾತಿಯ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು 2019ರ ಏಪ್ರಿಲ್ 15ರಂದು ಅಂಗೀಕರಿಸಿದ ಆದೇಶದ ಕುರಿತು ಸ್ಪಷ್ಟೀಕರಣ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.</p>.<p>‘ನಾವು ಈಗಿನ ಯಥಾಸ್ಥಿತಿಗೆ ಅಡ್ಡಿಯಾಗುವುದಿಲ್ಲ. ನ್ಯಾಯದ ಹಿತದೃಷ್ಟಿಯಿಂದ ನಾಲ್ಕು ವಾರಗಳ ನಂತರ ಅಂತಿಮವಾಗಿ ನಾವು ಇದರ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ’ ಎಂದು ಮುಖ್ಯ ನ್ಯಾಯಮೂರ್ತಿಗಳಾದ ಎಸ್.ಎ. ಬೊಬಡೆ, ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ಅವರನ್ನೊಳಗೊಂಡ ನ್ಯಾಯಪೀಠವು, ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರಿಗೆಮೌಖಿಕವಾಗಿ ತಿಳಿಸಿತು.</p>.<p>ಸಾಮಾನ್ಯ ವರ್ಗದ ನೌಕರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಜೀವ್ ಧವನ್ ಮತ್ತು ವಕೀಲ ಕುಮಾರ್ ಪರಿಮಳ್ ಅವರು, ಈ ವಿಷಯದಲ್ಲಿ ಮಧ್ಯಂತರ ಆದೇಶವನ್ನು ಜಾರಿಗೊಳಿಸಬೇಕೆಂಬ ಮನವಿಗೆ ವಿರೋಧ ವ್ಯಕ್ತಪಡಿಸಿದರು. ವರ್ಚುವಲ್ ನ್ಯಾಯಾಲಯದ ಬದಲಿಗೆ ಭೌತಿಕ ನ್ಯಾಯಾಲಯದಲ್ಲಿ ಈ ವಿಷಯವನ್ನು ಆಲಿಸಬೇಕು ಎಂದೂ ಮನವಿ ಮಾಡಿದರು.</p>.<p>ಇದಕ್ಕೆ ಸ್ಪಂದಿಸಿದ ಏಳು ನ್ಯಾಯಾಧೀಶರ ಸಮಿತಿಯು ಭೌತಿಕ ನ್ಯಾಯಾಲಯಗಳ ಪುನರಾರಂಭದ ಬಗ್ಗೆ ಪರಿಗಣಿಸಿದ್ದು, ಇನ್ನು ನಾಲ್ಕು ವಾರಗಳೊಳಗೆ ಈ ಸಮಸ್ಯೆಯನ್ನು ಪರಿಹರಿಸಲಾಗುವುದು. ಆದ್ದರಿಂದ ಎಲ್ಲಾ ತ್ವರಿತ ವಿಷಯಗಳ ಪ್ರಕರಣಗಳನ್ನು ನಾಲ್ಕು ವಾರಗಳ ಬಳಿಕ ವಿಚಾರಣೆಗೆ ಎತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿ ನೀಡುವಲ್ಲಿ ಮೀಸಲಾತಿಯ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು 2019ರ ಏಪ್ರಿಲ್ 15ರಂದು ಅಂಗೀಕರಿಸಿದ ಆದೇಶದ ಕುರಿತು ಸ್ಪಷ್ಟೀಕರಣ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.</p>.<p>‘ನಾವು ಈಗಿನ ಯಥಾಸ್ಥಿತಿಗೆ ಅಡ್ಡಿಯಾಗುವುದಿಲ್ಲ. ನ್ಯಾಯದ ಹಿತದೃಷ್ಟಿಯಿಂದ ನಾಲ್ಕು ವಾರಗಳ ನಂತರ ಅಂತಿಮವಾಗಿ ನಾವು ಇದರ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ’ ಎಂದು ಮುಖ್ಯ ನ್ಯಾಯಮೂರ್ತಿಗಳಾದ ಎಸ್.ಎ. ಬೊಬಡೆ, ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ಅವರನ್ನೊಳಗೊಂಡ ನ್ಯಾಯಪೀಠವು, ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರಿಗೆಮೌಖಿಕವಾಗಿ ತಿಳಿಸಿತು.</p>.<p>ಸಾಮಾನ್ಯ ವರ್ಗದ ನೌಕರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ರಾಜೀವ್ ಧವನ್ ಮತ್ತು ವಕೀಲ ಕುಮಾರ್ ಪರಿಮಳ್ ಅವರು, ಈ ವಿಷಯದಲ್ಲಿ ಮಧ್ಯಂತರ ಆದೇಶವನ್ನು ಜಾರಿಗೊಳಿಸಬೇಕೆಂಬ ಮನವಿಗೆ ವಿರೋಧ ವ್ಯಕ್ತಪಡಿಸಿದರು. ವರ್ಚುವಲ್ ನ್ಯಾಯಾಲಯದ ಬದಲಿಗೆ ಭೌತಿಕ ನ್ಯಾಯಾಲಯದಲ್ಲಿ ಈ ವಿಷಯವನ್ನು ಆಲಿಸಬೇಕು ಎಂದೂ ಮನವಿ ಮಾಡಿದರು.</p>.<p>ಇದಕ್ಕೆ ಸ್ಪಂದಿಸಿದ ಏಳು ನ್ಯಾಯಾಧೀಶರ ಸಮಿತಿಯು ಭೌತಿಕ ನ್ಯಾಯಾಲಯಗಳ ಪುನರಾರಂಭದ ಬಗ್ಗೆ ಪರಿಗಣಿಸಿದ್ದು, ಇನ್ನು ನಾಲ್ಕು ವಾರಗಳೊಳಗೆ ಈ ಸಮಸ್ಯೆಯನ್ನು ಪರಿಹರಿಸಲಾಗುವುದು. ಆದ್ದರಿಂದ ಎಲ್ಲಾ ತ್ವರಿತ ವಿಷಯಗಳ ಪ್ರಕರಣಗಳನ್ನು ನಾಲ್ಕು ವಾರಗಳ ಬಳಿಕ ವಿಚಾರಣೆಗೆ ಎತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>