<p><strong>ನವದೆಹಲಿ:</strong>ದೇವರ ಹೆಸರಿನಲ್ಲಿ ಪ್ರಾಣಿ ಅಥವಾ ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಲುಜಾರಿಗೊಳಿಸಿದ್ದ ಕಾಯ್ದೆ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇರಳ ಸರ್ಕಾರಕ್ಕೆ ಸೂಚಿಸಿದೆ.</p>.<p>ಹಿಂದೆ ಕಾಯ್ದೆಯ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರ ಪಿ.ಇ.ಗೋಪಾಲಕೃಷ್ಣನ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠ ಈ ಸಂಬಂಧ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.</p>.<p>'ಪ್ರಾಣಿ ಬಲಿಯು ಧಾರ್ಮಿಕ ಆಚರಣೆಯ ಆಂತರಿಕಭಾಗವಾಗಿದೆ' ಎಂದು ಅರ್ಜಿದಾರರು ವಾದಿಸಿದ್ದರು.ಹೈಕೋರ್ಟ್ ಆದೇಶವು ವ್ಯಕ್ತಿಯ ಮೂಲಭೂತ ಹಕ್ಕಿನ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.</p>.<p>ಧಾರ್ಮಿಕ ಆಚರಣೆಯಲ್ಲಿಪ್ರಾಣಿ ಅಥವಾ ಪಕ್ಷಿ ಬಲಿ ನೀಡುವುದು ಅಗತ್ಯ ಎಂಬುದನ್ನು ಸಾಬೀತುಪಡಿಸಲು ಯಾವುದೇ ಆಧಾರಗಳನ್ನು ಒದಗಿಸಿಲ್ಲ ಎಂದು ಹೇಳಿದ್ದ ಕೇರಳ ಹೈಕೋರ್ಟ್, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಯನ್ನು ಜೂನ್ 16 ರಂದು ವಜಾಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ದೇವರ ಹೆಸರಿನಲ್ಲಿ ಪ್ರಾಣಿ ಅಥವಾ ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಲುಜಾರಿಗೊಳಿಸಿದ್ದ ಕಾಯ್ದೆ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇರಳ ಸರ್ಕಾರಕ್ಕೆ ಸೂಚಿಸಿದೆ.</p>.<p>ಹಿಂದೆ ಕಾಯ್ದೆಯ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರ ಪಿ.ಇ.ಗೋಪಾಲಕೃಷ್ಣನ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠ ಈ ಸಂಬಂಧ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.</p>.<p>'ಪ್ರಾಣಿ ಬಲಿಯು ಧಾರ್ಮಿಕ ಆಚರಣೆಯ ಆಂತರಿಕಭಾಗವಾಗಿದೆ' ಎಂದು ಅರ್ಜಿದಾರರು ವಾದಿಸಿದ್ದರು.ಹೈಕೋರ್ಟ್ ಆದೇಶವು ವ್ಯಕ್ತಿಯ ಮೂಲಭೂತ ಹಕ್ಕಿನ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.</p>.<p>ಧಾರ್ಮಿಕ ಆಚರಣೆಯಲ್ಲಿಪ್ರಾಣಿ ಅಥವಾ ಪಕ್ಷಿ ಬಲಿ ನೀಡುವುದು ಅಗತ್ಯ ಎಂಬುದನ್ನು ಸಾಬೀತುಪಡಿಸಲು ಯಾವುದೇ ಆಧಾರಗಳನ್ನು ಒದಗಿಸಿಲ್ಲ ಎಂದು ಹೇಳಿದ್ದ ಕೇರಳ ಹೈಕೋರ್ಟ್, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಯನ್ನು ಜೂನ್ 16 ರಂದು ವಜಾಗೊಳಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>