<p><strong>ಮುಂಬೈ:</strong> ‘ವಿರೋಧ ಪಕ್ಷದ ನಾಯಕರಾಗಿ ದೇವೇಂದ್ರ ಫಡಣವೀಸ್ ಅವರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ‘ ಎಂದು ಶಿವಸೇನಾ ಮೆಚ್ಚುಗೆ ವ್ಯಕ್ತಪಡಿಸಿದೆ.</p>.<p>‘ಕೋವಿಡ್–19 ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆಯೂ ಫಡಣವೀಸ್ ತೃಪ್ತಿ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರ ಮತ್ತು ಕೊರೊನಾ ವೈರಸ್ ರೋಗಿಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ’ ಎಂದು ಹೇಳಿದೆ.</p>.<p>‘ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ರೀತಿಯಲ್ಲೇ ಫಡಣವೀಸ್ ಅವರು ಈಗ ವಿರೋಧ ಪಕ್ಷದ ನಾಯಕರಾಗಿ ಕ್ರಿಯಾಶೀಲರಾಗಿದ್ದಾರೆ. ಒಂದು ವೇಳೆ ಕೊರೊನಾ ಸೋಂಕು ದೃಢಪಟ್ಟರೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ತಮ್ಮ ಆಪ್ತ ಬಳಗಕ್ಕೆ ಫಡಣವೀಸ್ ತಿಳಿಸಿದ್ದಾರೆ. ಫಡಣವೀಸ್ ಅವರ ಈ ನಿಲುವು ಪ್ರಶಂಸನೀಯ’ ಎಂದು ಶಿವಸೇನಾದ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಬರೆಯಲಾಗಿದೆ.</p>.<p>’ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಕುರಿತ ಹೇಳಿಕೆಯನ್ನು ನಾಟಕೀಯ ಎಂದು ಹೇಳಲಾಗದು. ಸರ್ಕಾರದ ಆರೋಗ್ಯ ವ್ಯವಸ್ಥೆ ಸುರಕ್ಷಿತವಾಗಿದೆ ಎನ್ನುವ ವಿಶ್ವಾಸ ಫಡಣವೀಸ್ ಅವರಿಗಿದೆ. ಹೀಗಾಗಿ, ಅವರು ಈ ಹೇಳಿಕೆ ನೀಡಿದ್ದಾರೆ’ ಎಂದು ಶಿವಸೇನಾ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ವಿರೋಧ ಪಕ್ಷದ ನಾಯಕರಾಗಿ ದೇವೇಂದ್ರ ಫಡಣವೀಸ್ ಅವರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ‘ ಎಂದು ಶಿವಸೇನಾ ಮೆಚ್ಚುಗೆ ವ್ಯಕ್ತಪಡಿಸಿದೆ.</p>.<p>‘ಕೋವಿಡ್–19 ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆಯೂ ಫಡಣವೀಸ್ ತೃಪ್ತಿ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರ ಮತ್ತು ಕೊರೊನಾ ವೈರಸ್ ರೋಗಿಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ’ ಎಂದು ಹೇಳಿದೆ.</p>.<p>‘ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ರೀತಿಯಲ್ಲೇ ಫಡಣವೀಸ್ ಅವರು ಈಗ ವಿರೋಧ ಪಕ್ಷದ ನಾಯಕರಾಗಿ ಕ್ರಿಯಾಶೀಲರಾಗಿದ್ದಾರೆ. ಒಂದು ವೇಳೆ ಕೊರೊನಾ ಸೋಂಕು ದೃಢಪಟ್ಟರೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ತಮ್ಮ ಆಪ್ತ ಬಳಗಕ್ಕೆ ಫಡಣವೀಸ್ ತಿಳಿಸಿದ್ದಾರೆ. ಫಡಣವೀಸ್ ಅವರ ಈ ನಿಲುವು ಪ್ರಶಂಸನೀಯ’ ಎಂದು ಶಿವಸೇನಾದ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಬರೆಯಲಾಗಿದೆ.</p>.<p>’ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಕುರಿತ ಹೇಳಿಕೆಯನ್ನು ನಾಟಕೀಯ ಎಂದು ಹೇಳಲಾಗದು. ಸರ್ಕಾರದ ಆರೋಗ್ಯ ವ್ಯವಸ್ಥೆ ಸುರಕ್ಷಿತವಾಗಿದೆ ಎನ್ನುವ ವಿಶ್ವಾಸ ಫಡಣವೀಸ್ ಅವರಿಗಿದೆ. ಹೀಗಾಗಿ, ಅವರು ಈ ಹೇಳಿಕೆ ನೀಡಿದ್ದಾರೆ’ ಎಂದು ಶಿವಸೇನಾ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>