<p><strong>ಮುಂಬೈ:</strong> ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಹೊರತರಲು ಮತ್ತೊಬ್ಬರು ಮನಮೋಹನ್ ಸಿಂಗ್ ಅವಶ್ಯಕತೆಯಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.</p>.<p>‘ಕೇಂದ್ರದಲ್ಲಿ ಪಿ.ವಿ. ನರಸಿಂಹ ರಾವ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದ್ದಾಗ ನಾನೂ ಸಚಿವನಾಗಿದ್ದೆ. ಆಗ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಂತರದಲ್ಲಿ ಪ್ರಧಾನಿಯಾದ ಸಿಂಗ್ 10 ವರ್ಷ ಯುಪಿಎ ಸರ್ಕಾರವನ್ನು ಮುನ್ನಡೆಸಿದ್ದಾರೆ’ ಎಂದು ಪವಾರ್ ಹೇಳಿದ್ದಾರೆ.</p>.<p>ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿಯವರು ತಜ್ಞರ ಜತೆ ಸಮಾಲೋಚನೆ ನಡೆಸಿ ಆರ್ಥಿಕತೆಯನ್ನು ಮುಂದಕ್ಕೊಯ್ಯಬೇಕಿದೆ ಎಂದೂ ಅವರು ಹೇಳಿದ್ದಾರೆ.</p>.<p>‘ನಾವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದೇವೆ ಎಂಬುದು ನಮಗೆ ತಿಳಿದಿತ್ತು. ಹಣಕಾಸು ಸಚಿವರಾಗಿ ಮನಮೋಹನ್ ಸಿಂಗ್ ಅವರು ದೇಶಕ್ಕೆ ಹೊಸ ನಿರ್ದೇಶನ ನೀಡಿದ್ದರು. ಅವರು ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಹೊರತಂದಿದ್ದರು’ ಎಂದು ಶಿವಸೇನಾ ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ ಪವಾರ್ ಹೇಳಿದ್ದಾರೆ.</p>.<p>ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಮರಳಿ ಹಳಿಗೆ ತಂದ ಶ್ರೇಯ ನರಸಿಂಹ ರಾವ್ ಮತ್ತು ಸಿಂಗ್, ಇವರಿಬ್ಬರಿಗೂ ಸಲ್ಲಬೇಕು ಎಂದೂ ಅವರು ಹೇಳಿದ್ದಾರೆ. ಭಾರತಕ್ಕೆ ಮತ್ತೊಬ್ಬ ಮನಮೋಹನ್ ಸಿಂಗ್ ಅಗತ್ಯವಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು, ‘ಶೇ 100ರಷ್ಟು’ ಎಂದು ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಹೊರತರಲು ಮತ್ತೊಬ್ಬರು ಮನಮೋಹನ್ ಸಿಂಗ್ ಅವಶ್ಯಕತೆಯಿದೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.</p>.<p>‘ಕೇಂದ್ರದಲ್ಲಿ ಪಿ.ವಿ. ನರಸಿಂಹ ರಾವ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದ್ದಾಗ ನಾನೂ ಸಚಿವನಾಗಿದ್ದೆ. ಆಗ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಂತರದಲ್ಲಿ ಪ್ರಧಾನಿಯಾದ ಸಿಂಗ್ 10 ವರ್ಷ ಯುಪಿಎ ಸರ್ಕಾರವನ್ನು ಮುನ್ನಡೆಸಿದ್ದಾರೆ’ ಎಂದು ಪವಾರ್ ಹೇಳಿದ್ದಾರೆ.</p>.<p>ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿಯವರು ತಜ್ಞರ ಜತೆ ಸಮಾಲೋಚನೆ ನಡೆಸಿ ಆರ್ಥಿಕತೆಯನ್ನು ಮುಂದಕ್ಕೊಯ್ಯಬೇಕಿದೆ ಎಂದೂ ಅವರು ಹೇಳಿದ್ದಾರೆ.</p>.<p>‘ನಾವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದೇವೆ ಎಂಬುದು ನಮಗೆ ತಿಳಿದಿತ್ತು. ಹಣಕಾಸು ಸಚಿವರಾಗಿ ಮನಮೋಹನ್ ಸಿಂಗ್ ಅವರು ದೇಶಕ್ಕೆ ಹೊಸ ನಿರ್ದೇಶನ ನೀಡಿದ್ದರು. ಅವರು ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಹೊರತಂದಿದ್ದರು’ ಎಂದು ಶಿವಸೇನಾ ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ ಪವಾರ್ ಹೇಳಿದ್ದಾರೆ.</p>.<p>ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಮರಳಿ ಹಳಿಗೆ ತಂದ ಶ್ರೇಯ ನರಸಿಂಹ ರಾವ್ ಮತ್ತು ಸಿಂಗ್, ಇವರಿಬ್ಬರಿಗೂ ಸಲ್ಲಬೇಕು ಎಂದೂ ಅವರು ಹೇಳಿದ್ದಾರೆ. ಭಾರತಕ್ಕೆ ಮತ್ತೊಬ್ಬ ಮನಮೋಹನ್ ಸಿಂಗ್ ಅಗತ್ಯವಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು, ‘ಶೇ 100ರಷ್ಟು’ ಎಂದು ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>