ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಮತ್ತೊಬ್ಬರು ಮನಮೋಹನ್ ಸಿಂಗ್ ಅವಶ್ಯಕತೆಯಿದೆ: ಶರದ್ ಪವಾರ್

Last Updated 12 ಜುಲೈ 2020, 6:16 IST
ಅಕ್ಷರ ಗಾತ್ರ

ಮುಂಬೈ: ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಹೊರತರಲು ಮತ್ತೊಬ್ಬರು ಮನಮೋಹನ್ ಸಿಂಗ್‌ ಅವಶ್ಯಕತೆಯಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

‘ಕೇಂದ್ರದಲ್ಲಿ ಪಿ.ವಿ. ನರಸಿಂಹ ರಾವ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದ್ದಾಗ ನಾನೂ ಸಚಿವನಾಗಿದ್ದೆ. ಆಗ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಂತರದಲ್ಲಿ ಪ್ರಧಾನಿಯಾದ ಸಿಂಗ್ 10 ವರ್ಷ ಯುಪಿಎ ಸರ್ಕಾರವನ್ನು ಮುನ್ನಡೆಸಿದ್ದಾರೆ’ ಎಂದು ಪವಾರ್ ಹೇಳಿದ್ದಾರೆ.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿಯವರು ತಜ್ಞರ ಜತೆ ಸಮಾಲೋಚನೆ ನಡೆಸಿ ಆರ್ಥಿಕತೆಯನ್ನು ಮುಂದಕ್ಕೊಯ್ಯಬೇಕಿದೆ ಎಂದೂ ಅವರು ಹೇಳಿದ್ದಾರೆ.

‘ನಾವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದೇವೆ ಎಂಬುದು ನಮಗೆ ತಿಳಿದಿತ್ತು. ಹಣಕಾಸು ಸಚಿವರಾಗಿ ಮನಮೋಹನ್ ಸಿಂಗ್ ಅವರು ದೇಶಕ್ಕೆ ಹೊಸ ನಿರ್ದೇಶನ ನೀಡಿದ್ದರು. ಅವರು ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಹೊರತಂದಿದ್ದರು’ ಎಂದು ಶಿವಸೇನಾ ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ ಪವಾರ್ ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಮರಳಿ ಹಳಿಗೆ ತಂದ ಶ್ರೇಯ ನರಸಿಂಹ ರಾವ್ ಮತ್ತು ಸಿಂಗ್, ಇವರಿಬ್ಬರಿಗೂ ಸಲ್ಲಬೇಕು ಎಂದೂ ಅವರು ಹೇಳಿದ್ದಾರೆ. ಭಾರತಕ್ಕೆ ಮತ್ತೊಬ್ಬ ಮನಮೋಹನ್ ಸಿಂಗ್ ಅಗತ್ಯವಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು, ‘ಶೇ 100ರಷ್ಟು’ ಎಂದು ಉತ್ತರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT