ನೇಪಾಳದ ಸಶಸ್ತ್ರ ಪೊಲೀಸರು ಈಚೆಗೆ ಗಡಿಯಲ್ಲಿ ಗುಂಡಿನ ದಾಳಿ ನಡೆಸಿ, ಒಬ್ಬ ಭಾರತೀಯ ವ್ಯಕ್ತಿಯ ಹತ್ಯೆ ಮಾಡಿರುವುದನ್ನು ಉಲ್ಲೇಖಿಸಿ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಬರೆದಿರುವ ಸಂಪಾದಕೀಯದಲ್ಲಿ, ‘ಗಡಿಯಲ್ಲಿ ಸದ್ಯಕ್ಕೆ ಚೀನಾ ಶಾಂತಿ ಕಾಪಾಡುತ್ತಿದೆ. ಆದರೆ, ಗುಂಡಿನ ದಾಳಿ ನಡೆಸುವಂತೆ ನೇಪಾಳ ಹಾಗೂ ಪಾಕಿಸ್ತಾನಕ್ಕೆ ಕುಮ್ಮಕ್ಕು ನೀಡುವ ಮೂಲಕ ಭಾರತದ ಗಡಿಯಲ್ಲಿ ಪ್ರಕ್ಷುಬ್ಧತೆ ಮುಂದುವರಿಸುವ ಆಟವಾಡುತ್ತಿದೆ’ ಎಂದು ಆರೋಪಿಸಲಾಗಿದೆ.