ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದಿರುವ ಅವರು, 'ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಪೌರತ್ವ, ಜಾತ್ಯತೀತತೆ ಮತ್ತು ಸಂಯುಕ್ತ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಕೈಬಿಟ್ಟಿರುವ ನಿರ್ಧಾರವನ್ನು ನಾನು ಖಂಡಿಸುತ್ತೇನೆ. ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಒಂದು ಪೀಳಿಗೆಯ ವಿದ್ಯಾರ್ಥಿಗಳನ್ನು ಈ ನಿರ್ಧಾರ ವಂಚಿಸಲಿದೆ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.