ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗಪುರ: ದೇವಸ್ಥಾನದ ಪ್ರಧಾನ ಅರ್ಚಕ ಬಂಧನ

ಚಿನ್ನಾಭರಣ ನಾಪತ್ತೆ
Last Updated 2 ಆಗಸ್ಟ್ 2020, 8:46 IST
ಅಕ್ಷರ ಗಾತ್ರ

ಸಿಂಗಪುರ: ಇಲ್ಲಿನ ಮರಿಯಮ್ಮನ ದೇವಾಲಯದ ಪ್ರಧಾನ ಅರ್ಚಕರನ್ನು ಸಿಂಗಪುರ ಪೊಲೀಸರು ಬಂಧಿಸಿದ್ದಾರೆ.

ಪ್ರಧಾನ ಅರ್ಚಕರ ಸುಪರ್ದಿಯಲ್ಲಿದ್ದ ಕೆಲ ಚಿನ್ನಾಭರಣಗಳು ನಾಪತ್ತೆಯಾಗಿದ್ದರಿಂದ ದೇವಸ್ಥಾನದ ಆಡಳಿತ ಮಂಡಳಿ ದೂರು ಸಲ್ಲಿಸಿತ್ತು.

ಪೂಜೆಯ ಸಮಯದಲ್ಲಿ ದೇವಿಯ ಶೃಂಗಾರಕ್ಕೆ ಚಿನ್ನಾಭರಣಗಳನ್ನು ಬಳಸಲಾಗುತ್ತದೆ. ಹಾಗಾಗಿ ಈ ಆಭರಣಗಳನ್ನು ಪ್ರಧಾನ ಅರ್ಚಕರಿಗೆ ನೀಡಲಾಗಿತ್ತು. ಆದರೆ, ಪರಿಶೀಲನೆ ಸಂದರ್ಭದಲ್ಲಿ ಕೆಲವು ಆಭರಣಗಳು ನಾಪತ್ತೆಯಾಗಿರುವುದು ತಿಳಿದು ಬಂದಿತ್ತು.

‘ಈ ಪ್ರಕರಣದ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾಗ ಪ್ರಧಾನ ಅರ್ಚಕರು ತಪ್ಪೊಪ್ಪಿಕೊಂಡಿದ್ದು, ನಾಪತ್ತೆಯಾಗಿದ್ದ ಚಿನ್ನಾಭರಣವನ್ನು ಹಿಂತಿರುಗಿಸದ್ದಾರೆ. ಈ ಪ್ರಕರಣದಲ್ಲಿ ಮತ್ತೊಬ್ಬರು ಭಾಗಿಯಾಗಿಲ್ಲ’ ಎಂದು ಮರಿಯಮ್ಮನ ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT