<p class="title"><strong>ಲಖನೌ</strong>: ₹30 ಲಂಚ ನೀಡದ ಕಾರಣಕ್ಕೆ ರೋಗಿಯೊಬ್ಬರಿಗೆ ಸೇವೆ ನೀಡಲು ನಿರಾಕರಿಸಿದ ಘಟನೆ ಉತ್ತರ ಪ್ರದೇಶದಡಿಯೋರಿಯಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.<br /><br />ರೋಗಿಯ ಬ್ಯಾಂಡೆಜ್ ಬದಲಿಸಲು ಅವರ ಪುತ್ರಿ ಮತ್ತು ಆರು ವರ್ಷದ ಮೊಮ್ಮಗ ಅವರನ್ನು ಸ್ಟ್ರೆಚರ್ನಲ್ಲಿ ತಳ್ಳಿಕೊಂಡು ಹೋಗಿರುವ ಅಮಾನವೀಯ ಘಟನೆ ನಡೆದಿದೆ.ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿದ್ದಜಿಲ್ಲೆಯ ಗೌರ ಗ್ರಾಮದ ನಿವಾಸಿ ಚೆಡಿ ಯಾದವ್ ಎಂಬುವರನ್ನು ಕಳೆದ ವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಅವರ ಬ್ಯಾಂಡೆಜ್ ಬದಲಿಸಲು ಡ್ರೆಸ್ಸಿಂಗ್ ರೂಮ್ಗೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆ ಸಿಬ್ಬಂದಿ ಬಳಿ ಪುತ್ರಿ ಬಿಂದು ದೇವಿ ಮನವಿ ಮಾಡಿದರು. ಆದರೆ, ಸಿಬ್ಬಂದಿ ₹ 30 ಕೇಳಿದ್ದಾರೆ. ‘ನಾನು ಬಡವಿ. ಪ್ರತಿದಿನ ಹಣ ನೀಡುವಷ್ಟು ಸಾಮರ್ಥ್ಯ ನನಗಿಲ್ಲ’ ಎಂದು ಬಿಂದು ತಿಳಿಸಿದ್ದಾರೆ.</p>.<p>‘ಎಷ್ಟೇ ಮನವಿ ಮಾಡಿದರೂ, ಸಿಬ್ಬಂದಿ ಮನಸ್ಸು ಕರಗಲಿಲ್ಲ. ಕೊನೆಗೆ ವಿಧಿಯಿಲ್ಲದೇ, ನಾನು ಮತ್ತು ನನ್ನ ಆರು ವರ್ಷದ ಮಗ ಕರೆದುಕೊಂಡು ಹೋದೆವು. ಅವನುಸ್ಟ್ರೆಚರ್ನನ್ನು ಹಿಂದಿನಿಂದ ನೂಕಿದ, ನಾನು ಮುಂದೆ ಎಳೆದುಕೊಂಡು ಹೋದೆ’ ಎಂದು ಬಿಂದು ತಿಳಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>‘ಈ ಘಟನೆ ನನ್ನ ಅರಿವಿಗೆ ಬಂದಿರಲಿಲ್ಲ. ವಿಡಿಯೊ ನೋಡಿದ್ದೇನೆ. ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳುತ್ತೇನೆ’ ಎಂದುಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ತಿಳಿಸಿದ್ದಾರೆ.</p>.<p>ಈ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ‘ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಕರುಣಾಜನಕ ಸ್ಥಿತಿಯನ್ನು ವಿಡಿಯೊ ಬಹಿರಂಗಪಡಿಸಿದೆ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ</strong>: ₹30 ಲಂಚ ನೀಡದ ಕಾರಣಕ್ಕೆ ರೋಗಿಯೊಬ್ಬರಿಗೆ ಸೇವೆ ನೀಡಲು ನಿರಾಕರಿಸಿದ ಘಟನೆ ಉತ್ತರ ಪ್ರದೇಶದಡಿಯೋರಿಯಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.<br /><br />ರೋಗಿಯ ಬ್ಯಾಂಡೆಜ್ ಬದಲಿಸಲು ಅವರ ಪುತ್ರಿ ಮತ್ತು ಆರು ವರ್ಷದ ಮೊಮ್ಮಗ ಅವರನ್ನು ಸ್ಟ್ರೆಚರ್ನಲ್ಲಿ ತಳ್ಳಿಕೊಂಡು ಹೋಗಿರುವ ಅಮಾನವೀಯ ಘಟನೆ ನಡೆದಿದೆ.ಹಲ್ಲೆಗೊಳಗಾಗಿ ತೀವ್ರ ಗಾಯಗೊಂಡಿದ್ದಜಿಲ್ಲೆಯ ಗೌರ ಗ್ರಾಮದ ನಿವಾಸಿ ಚೆಡಿ ಯಾದವ್ ಎಂಬುವರನ್ನು ಕಳೆದ ವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಅವರ ಬ್ಯಾಂಡೆಜ್ ಬದಲಿಸಲು ಡ್ರೆಸ್ಸಿಂಗ್ ರೂಮ್ಗೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆ ಸಿಬ್ಬಂದಿ ಬಳಿ ಪುತ್ರಿ ಬಿಂದು ದೇವಿ ಮನವಿ ಮಾಡಿದರು. ಆದರೆ, ಸಿಬ್ಬಂದಿ ₹ 30 ಕೇಳಿದ್ದಾರೆ. ‘ನಾನು ಬಡವಿ. ಪ್ರತಿದಿನ ಹಣ ನೀಡುವಷ್ಟು ಸಾಮರ್ಥ್ಯ ನನಗಿಲ್ಲ’ ಎಂದು ಬಿಂದು ತಿಳಿಸಿದ್ದಾರೆ.</p>.<p>‘ಎಷ್ಟೇ ಮನವಿ ಮಾಡಿದರೂ, ಸಿಬ್ಬಂದಿ ಮನಸ್ಸು ಕರಗಲಿಲ್ಲ. ಕೊನೆಗೆ ವಿಧಿಯಿಲ್ಲದೇ, ನಾನು ಮತ್ತು ನನ್ನ ಆರು ವರ್ಷದ ಮಗ ಕರೆದುಕೊಂಡು ಹೋದೆವು. ಅವನುಸ್ಟ್ರೆಚರ್ನನ್ನು ಹಿಂದಿನಿಂದ ನೂಕಿದ, ನಾನು ಮುಂದೆ ಎಳೆದುಕೊಂಡು ಹೋದೆ’ ಎಂದು ಬಿಂದು ತಿಳಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>‘ಈ ಘಟನೆ ನನ್ನ ಅರಿವಿಗೆ ಬಂದಿರಲಿಲ್ಲ. ವಿಡಿಯೊ ನೋಡಿದ್ದೇನೆ. ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳುತ್ತೇನೆ’ ಎಂದುಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ತಿಳಿಸಿದ್ದಾರೆ.</p>.<p>ಈ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ‘ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಕರುಣಾಜನಕ ಸ್ಥಿತಿಯನ್ನು ವಿಡಿಯೊ ಬಹಿರಂಗಪಡಿಸಿದೆ’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>