ಈ ನಡುವೆ ಕೇರಳ ಸರ್ಕಾರವು ಮಕ್ಕಳ ಸಮಸ್ಯೆಗಳ ಪರಿಹಾರಕ್ಕಾಗಿ ‘ಚಿರಿ’ (ನಗು) ಅನ್ನುವ ಯೋಜನೆಗೆ ಚಾಲನೆ ನೀಡಿದೆ. ವಿದ್ಯಾರ್ಥಿ ಪೊಲೀಸ್ ಕೆಡೆಟ್ ಈ ಯೋಜನೆಯ ಭಾಗವಾಗಿದ್ದು,ಶಾಲಾ ಮಕ್ಕಳು, ಇಲ್ಲಿ ಇತರ ಮಕ್ಕಳೊಂದಿಗೆ ಸಂವಹನ ನಡೆಸಲಿದ್ದಾರೆ. ಈ ಸಂಬಂಧ ಅಧ್ಯಯನ ನಡೆಸಲು ಅಗ್ನಿಶಾಮಕ ಮತ್ತು ರಕ್ಷಣಾ ದಳದ ಮಹಾ ನಿರ್ದೇಶಕರಾದ ಆರ್. ಶ್ರೀಲೇಖಾ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನೂ ರಚಿಸಲಾಗಿದೆ.